Kannada NewsKarnataka News

*ಬ್ರಾಹ್ಮಣ ಮಹಾಸಭಾ ಚುನಾವಣೆ : ವೇ. ಮೂ. ಡಾ.  ಭಾನುಪ್ರಕಾಶ್ ಶರ್ಮ ಬೆಂಬಲಿಗರ ಅವಿರೋಧ ಆಯ್ಕೆ*  

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಏಪ್ರಿಲ್‌ 13ರಂದು ನಡೆಯಲಿರುವ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ (ಎಕೆಬಿಎಂಎಸ್‌) ಅಧ್ಯಕ್ಷ ಸ್ಥಾನದ ಚುನಾವಣೆಗೆ  ಪೂರ್ವಭಾವಿಯಾಗಿ ಗುರುವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಡೆದ ಜಿಲ್ಲಾ ಪ್ರತಿನಿಧಿಗಳ ಆಯ್ಕೆಯಲ್ಲಿ  ಖ್ಯಾತ ವಿದ್ವಾಂಸ  ವೇ. ಮೂ. ಡಾ.  ಭಾನುಪ್ರಕಾಶ್ ಶರ್ಮ ಅವರ ಬೆಂಬಲಿಗರು ಹಲವು ಜಿಲ್ಲೆಗಳಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.  

ಈ ಮೂಲಕ ಪ್ರಚಾರದ ಮೊದಲ ಹಂತದಲ್ಲೇ ಡಾ. ಭಾನುಪ್ರಕಾಶ್ ಶರ್ಮಾ ಅವರು ಮೇಲುಗೈ ಸಾಧಿಸಿದ್ದಾರೆ.

ಅಧ್ಯಕ್ಷ ಹುದ್ದೆಗೆ ಸ್ಪರ್ಧೆಗೆ ಇಳಿದಿರುವ ಭಾನುಪ್ರಕಾಶ್ ಶರ್ಮಾ ಬೆಂಬಲಿಗರಾದ ದುರ್ಗಾ ಪ್ರಸಾದ್‌ (ಕೊಡಗು), ಮಹೇಶ್ ಕಜೆ (ಮಂಗಳೂರು),
ಡಾ.ಶ್ರೀನಾಥ್‌  (ಬಳ್ಳಾರಿ),  ಕೆ.ದಿವಾಕರ್‌ (ವಿಜಯನಗರ), ಅಕ್ಷಯ ಕುಲಕರ್ಣಿ ( ಬೆಳಗಾವಿ),
 ಜೆ ಎಸ್ ಮಹಾಬಲ (ಚಿಕ್ಕಮಗಳೂರು),   ಶ್ರೀನಿವಾಸ ಹುಯಿಲಗೋಳ ( ಗದಗ), ಹಾಗು  ಉತ್ತರ ಕನ್ನಡದಲ್ಲಿ ಶ್ರೀಪಾದ ನಾರಾಯಣ ರಾಯಸದ್‌  ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉಳಿದ ಜಿಲ್ಲೆಗಳಲ್ಲಿ ಚುನಾವಣೆ ಮೂಲಕ ಪ್ರತಿನಿಧಿಗಳ ಆಯ್ಕೆ ನಡೆಯಲಿದೆ.

Home add -Advt

Related Articles

Back to top button