Belagavi NewsBelgaum NewsKannada NewsKarnataka NewsPolitics

*ಖಾಸಗಿ ಸಂಘಕ್ಕೆ ಕನ್ನಡ ಭವನ ಹಸ್ತಾಂತರಿಸಿರುವ ಆರೋಪ: ಅಧ್ಯಕ್ಷರಿಗೆ ನೋಟಿಸ್ ಜಾರಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಕನ್ನಡ ಭವನವನ್ನು ಖಾಸಗಿ ಸಂಘಕ್ಕೆ ಹಸ್ತಾಂತರಿಸಿದ ಆರೋಪದ ಹಿನ್ನೆಲೆಯಲ್ಲಿ ಅಧ್ಯಕ್ಷೆ ಮಂಗಲಾ ಮೆಟಗುಡ್ಡ ಅವರಿಗೆ ಕರ್ನಾಟಕ ಸಾಹಿತ್ಯ ಪತಿಷತ್ತು ನೋಟೀಸ್ ಜಾರಿ ಮಾಡಿದೆ.

ಬೆಳಗಾವಿಯ 9 ಕನ್ನಡಪರ ಸಂಘಟನೆಗಳು ನೀಡಿದ ದೂರಿನ ಮೇರೆಗೆ ರಾಜ್ಯ ಕಸಾಪ ಆಡಳಿತಾಧಿಕಾರಿ ಕೆ.ಎ. ದಯಾನಂದ ಅವರು ಈ ಕಠಿಣ ಕ್ರಮ ಕೈಗೊಂಡಿದ್ದಾರೆ. ಸುಮಾರು 75 ಕೋಟಿ ವೆಚ್ಚದ ಈ ಭವನವನ್ನು ನಿಯಮಬಾಹಿರವಾಗಿ ಖಾಸಗಿ ಸಂಸ್ಥೆಯೊಂದಕ್ಕೆ ವಹಿಸಿಕೊಟ್ಟಿರುವುದರಿಂದ ಪರಿಷತ್ತಿಗೆ ತಿಂಗಳಿಗೆ ಅಂದಾಜು 2 ಲಕ್ಷ ರೂ. ಬಾಡಿಗೆ ಆದಾಯ ನಷ್ಟವಾಗುತ್ತಿದೆ ಎಂದು ನೋಟೀಸ್‌ನಲ್ಲಿ ಉಲ್ಲೇಖಿಸಲಾಗಿದೆ.

ನಿಯಮಾವಳಿಗಳ ಸ್ಪಷ್ಟ ಉಲ್ಲಂಘನೆ ನಡೆಸಿರುವ ಹಿನ್ನೆಲೆಯಲ್ಲಿ “ನಿಮ್ಮ ವಿರುದ್ಧ ಯಾಕೆ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಬಾರದು?” ಎಂದು ಪ್ರಶ್ನಿಸಲಾಗಿದೆ. ಈ ಕುರಿತು ಏಳು ದಿನಗಳ ಒಳಗಾಗಿ ಸೂಕ್ತ ಸಮರ್ಥನೆ ನೀಡದಿದ್ದರೆ ಮುಂದಿನ ಕಾನೂನು ಕ್ರಮ ಜರುಗಿಸುವುದಾಗಿ ರಾಜ್ಯ ಕರ್ನಾಟಕ ಸಾಹಿತ್ಯ ಪರಿಷತ್ತು ಎಚ್ಚರಿಕೆ ನೀಡಿದೆ.

Home add -Advt

Related Articles

Back to top button