Kannada NewsKarnataka News

ಕಂಪೌಂಡ್ ಕುಸಿದು ಒಂದೆ ಕುಟುಂಬದ ನಾಲ್ವರ ಸಾವು

ಪ್ರಗತಿವಾಹಿನಿ ಸುದ್ದಿ: ದಕ್ಷಣ ಕನ್ನಡ ಜಿಲ್ಲೆಯ ಉಲ್ಲಾಳದ ಮುನ್ನೂರಿನ ಮದನಿ ನಗರದಲ್ಲಿ ಮನೆಯ ಹಿಂಬ್ಇ ಕಂಪೌಂಡ್ ಕುಸಿದುಬಿದ್ದು ಒಂದೆ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. 

ಯಾಸಿರ್(45), ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಮೃತ ದುರ್ದೈವಿಗಳು.ಸ್ಥಳಕ್ಕೆ ದೌಡಾಯಿಸಿರುವ ಉಳ್ಳಾಲ ಪೊಲೀಸರು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಇಬ್ಬರ ಶವಗಳನ್ನು ಈಗಾಗಲೇ ಹೊರ ತೆಗೆಯಲಾಗಿದೆ.  

ಅಬೂಬಕ್ಕರ್ ಎಂಬವರಿಗೆ ಸಂಬಂಧಿಸಿದ ಮನೆಯ ಗೋಡೆ, ಕುಸಿದು ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ.ಸ್ಥಳಿಯರು ಹಾಗೂ ಪೊಲೀಸರು ಮೃತದೇಹ ಹೊರತೆಗೆದು ಆಸ್ಪತ್ರೆಗೆ ರವಾನಿಸಿದ್ದಾರೆ.

Home add -Advt

Related Articles

Back to top button