Uncategorized

*ಯಾರ ಮೀಸಲಾತಿ ಕಡಿಮೆ ಮಾಡಿ ಮುಸ್ಲಿಂರಿಗೆ ಕೊಡುತ್ತೀರಿ? ; ಕಾಂಗ್ರೆಸ್ ನಾಯಕರಿಗೆ ಅಮಿತ್ ಶಾ ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ; ಗುಂಡ್ಲುಪೇಟೆ: ಕಾಂಗ್ರೆಸ್ ಈಗಲೂ ತುಷ್ಟೀಕರಣದ ರಾಜನೀತಿ ಮಾಡುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.

ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ರೋಡ್ ಶೋ ನಡೆಸಿ ಮತಯಾಚಿಸಿದ ಅಮಿತ್ ಶಾ, ಕಾಂಗ್ರೆಸ್ ಮುಸ್ಲಿಂರಿಗೆ 4% ಮೀಸಲಾತಿ ಕೊಟ್ಟಿತ್ತು. ಆದರೆ ಬಿಜೆಪಿ ಅದೆಲ್ಲವನ್ನೂ ತೆಗೆದು ಹಾಕಿದೆ. ಕಾಂಗ್ರೆಸ್ ಅಧ್ಯಕ್ಷರು ಹೇಳುತ್ತಿದ್ದಾರೆ ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ. ಬಂದ ಮೇಲೆ ಮುಸ್ಲಿಂ ಮರಿಗೆ ಮೀಸಲಾತಿ ಕೊಡುತ್ತೇವೆ ಎಂದು. ನೀವೇ ಹೇಳಿ ಮುಸ್ಲಿಂ ರಿಗೆ ಮೀಸಲಾತಿ ಕೊಡಬೇಕಾ? ಎಂದು ಪ್ರಶ್ನಿಸಿದ್ದಾರೆ.

ಡಿ.ಕೆ.ಶಿವಕುಮಾರ್ ಅವರು ಮುಸ್ಲಿಂರಿಗೆ ಮೀಸಲಾತಿ ವಾಪಸ್ ಕೊಡುವ ಬಗ್ಗೆ ಹೇಳಿದ್ದೀರಿ. ಯಾರ ಮೀಸಲಾತಿ ಕಡಿಮೆ ಮಾಡಿ ಮುಸ್ಲಿಂರಿಗೆ ಕೊಡುತ್ತೀರಿ? ಕರ್ನಾಟಕದ ಜನತೆಗೆ ಉತ್ತರ ಕೊಡಿ. ಒಕ್ಕಲಿಗರ ಮೀಸಲಾತಿ ಕಡಿಮೆ ಮಾಡುತ್ತೀರಾ? ಲಿಂಗಾಯಿತರ ಮೀಸಲಾತಿ ಕಡಿಮೆ ಮಾಡುತ್ತೀರಾ? ಬೇರೆ ಯಾರ ಮೀಸಲಾತಿ ಕಡಿಮೆ ಮಾಡಿ ಮುಸ್ಲಿಂರಿಗೆ ಕೊಡುತ್ತೀರಿ ಉತ್ತರಿಸಿ ಎಂದು ಹೇಳಿದ್ದಾರೆ.

https://pragati.taskdun.com/vidhanasabha-electiongokakmahantesh-kadadisiddaramaih/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button