Karnataka NewsLatestPolitics
*ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಸಿಎಂ ಸಿದ್ದರಾಮಯ್ಯ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಬಜೆಟ್ ನಲ್ಲಿ ಹವ್ಯಕ ಭಾಷಾ ಅಭಿವೃದ್ಧಿಗೆ ಮಹತ್ವದ ಘೋಷಣೆ ಮಾಡಿದ್ದಾರೆ. ಕರ್ನಾಟಕ ರಾಜ್ಯದ ಸಂಸ್ಕೃತಿಯ ಅಂಗವಾಗಿರುವ ಹವ್ಯಕ ಭಾಷೆಯ ಬೆಳವಣಿಗೆಗೆ ಹವ್ಯಕ ಭಾಷಾ ಅಕಾಡೆಮಿಯನ್ನು ಸ್ಥಾಪಿಸಲಾಗುವುದು ಎಂದು ಘೋಷಿಸಿದ್ದಾರೆ.
ಇದೇ ವೇಳೆ ಗೋರ್ ಬಂಜಾರ ಸಮುದಾಯದ ಇತಿಹಾಸ, ಸಂಸ್ಕೃತಿ, ಭಾಷೆ, ಆಚಾರ-ವಿಚಾರ, ಉಡುಗೆ, ಆಹಾರ ಪದ್ದತಿ, ಕಸುಬು ಇತ್ಯಾದಿಗಳನ್ನು ದಾಖಲಿಸಲು ಬಂಜಾರ ವಿಶ್ವಕೋಶವನ್ನು ಪ್ರಕಟಿಸಲಾಗುವುದು. 384. ಮಕ್ಕಳಿಗಾಗಿ ಪಂಪ, ರನ್ನ, ಜನ್ನ, ಬಸವಾದಿ ಶರಣರು, ಸರ್ವಜ್ಞ, ಕನಕ, ಪುರಂದರ, ಲಕ್ಷ್ಮೀಶ, ಸಂಚಿ ಹೊನ್ನಮ್ಮ ಇತ್ಯಾದಿ ಪ್ರಾಚೀನ ಕವಿಗಳ ಹಾಗೂ ಕುವೆಂಪು, ಶಿವರಾಮ ಕಾರಂತ, ದೇವನೂರು ಮಹದೇವ ಮುಂತಾದವರ ಕೃತಿಗಳ ಬಣ್ಣದ ಚಿತ್ರಗಳು ಮತ್ತು ಸಣ್ಣ ವಾಕ್ಯಗಳ ಪುಸ್ತಕಗಳನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಮುದ್ರಿಸಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.


