Kannada NewsKarnataka NewsLatest

 ಡಾ.ಶಿವ ಬಸವ ಮಹಾಸ್ವಾಮಿಗಳವರ ಪುಣ್ಯ ಸ್ಮರಣೆಯ ರಜಿತ ಮಹೋತ್ಸವ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ -ಬೈಲಹೊಂಗಲ ತಾಲೂಕಿನ ನಾಗನೂರಿನ ಕಾಯಕಯೋಗಿ   ಡಾ.ಶಿವ ಬಸವ ಮಹಾಸ್ವಾಮಿಗಳವರ ಪುಣ್ಯ ಸ್ಮರಣೆಯ ರಜಿತ ಮಹೋತ್ಸವ ನಡೆಯುತ್ತಿದೆ.

ಶ್ರೀ ಡಾ.ಸಾವಳಗೇಶ್ವರ ದೇವರ ನಿರಂಜನ ಪಟ್ಟಾಧಿಕಾರ ಮಹೋತ್ಸವದ ಇಂದಿನ ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು  ಸುತ್ತೂರಿನ ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳು ವಹಿಸಿದ್ದರು. ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳು, ಗದಗ ತೋಂಟದಾರ್ಯ ಮಠದ ಸಿದ್ದರಾಮ ಮಹಾಸ್ವಾಮಿಗಳು, ಕಾರಂಜಿ ಮಠದ ಗುರುಸಿದ್ಧ ಸ್ವಾಮಿಗಳು, ಮೋಟಗಿಮಠದ ಪ್ರಭು ಚನ್ನಬಸವ ಸ್ವಾಮಿಗಳು, ಸೇರಿದಂತೆ ಹಲವು ಮಠಾಧೀಶರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.

Home add -Advt

 ಇದೆ ಸಂದರ್ಭದಲ್ಲಿ ನಾಗನೂರಿನ ಮಹಾದ್ವಾರ ಮತ್ತು ಡಾ.ಶಿವಬಸವ ಮಹಾಸ್ವಾಮಿಗಳ ಕಂಚಿನ ಮೂರ್ತಿಯನ್ನು ಲೋಕಾರ್ಪಣೆ ಮಾಡಲಾಯಿತು. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ,  ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ, ಶಾಸಕರಾದ‌ ಮಹಾಂತೇಶ ದೊಡಗೌಡರ, ಮಹಾಂತೇಶ ಕೌಜಲಗಿ ಮೊದಲಾದವರು ಭಾಗವಹಿಸಿದ್ದರು.

Related Articles

Back to top button