Kannada NewsLatestNational

*ಎರಡು ರೈಲುಗಳ ನಡುವೆ ಅಪಘಾತ; ಸಾವಿನ ಸಂಖ್ಯೆ 14ಕ್ಕೇರಿಕೆ; 12 ರೈಲುಗಳ ಸಂಚಾರ ಸ್ಥಗಿತ*

ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಎರಡು ರೈಲುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

ಆಂದ್ರಪ್ರದೇಶದ ವಿಜಯನಗರಂ ನಲ್ಲಿ ಎರಡು ಪ್ಯಾಸೇಂಜರ್ ರೈಲುಗಳ ನಡುವೆ ನಿನ್ನೆ ಅಪಘಾತ ಸಂಭವಿಸಿತ್ತು. ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಹಲವರು ಗಾಯಗೊಂಡಿದ್ದಾರೆ.

ವಿಶಾಖಪಟ್ಟಣಂ-ರಾಯಗಡ ಪ್ಯಾಸೇಂಜರ್ ರೈಲು ಕಾಂತಕಪಲ್ಲಿ ರೈಲು ನಿಲ್ದಾಣದಲ್ಲಿ ಸಿಗ್ನಲ್ ಗಾಗಿ ನಿಂತಿತ್ತು. ಈ ಹೇಳೆ ಹಿಂದಿನಿಂದ ಬಂದ ಮತ್ತೊಂದು ಪ್ಯಾಸೇಂಜರ್ ರೈಲು ವಿಶಾಖಪಟ್ಟಣಂ-ರಾಯಗಡ ಪ್ಯಾಸೇಂಜರ್ ರೈಲಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮೂರು ಬೋಗಿಗಳು ಹಳಿ ತಪ್ಪಿ ದುರಂತ ಸಂಭವಿಸಿದೆ.

ಅಪಘಾತದ ಬಳಿಕ 12 ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ. 15 ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button