Latest

ಸೇತುವೆಗೆ ಗುದ್ದಿದ ಕಾರು; 6 ತಿಂಗಳ ಮಗು ಸೇರಿ ಐವರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಭೀಕರ ಕಾರು ಅಪಘಾತದಲ್ಲಿ 6 ತಿಂಗಳ ಮಗು ಸೇರಿದಂತೆ ಐವರು ಸಾವನ್ನಪ್ಪಿರುವ ಘಟನೆ ಆಂದ್ರಪ್ರದೇಶದ ವಿಜಯವಾಡ-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯ ಗೌರವರಂ ಗ್ರಾಮದ ಬಳಿ ನಡೆದಿದೆ.

ಕಾರು ಚಾಲಕನ ನಿಯಂತ್ರಣತಪ್ಪಿ ನಾಗಾರ್ಜುನ ಸಾಗರ ಎಡದಂಡೆ ಕಾಲುವೆಯ ಸೇತುವೆಯ ಕಟ್ಟೆಗೆ ಗುದ್ದಿದೆ. ಪರಿಣಾಮ 6 ತಿಂಗಳ ಮಗು, ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Home add -Advt

ಗಂಭೀರವಾಗಿ ಗಾಯಗೊಂಡಿದ್ದ ಓರ್ವ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಓರ್ವ ಗಾಯಾಳುವನ್ನು ಜಗ್ಗಯ್ಯಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೇಟಿಎಂ ಸಂಸ್ಥಾಪಕ ಅರೆಸ್ಟ್ ಜಾಮೀನಿನ ಮೇಲೆ ಬಿಡುಗಡೆ

Related Articles

Back to top button