
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹೆಚ್.ಡಿ.ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡಿದ್ದು ಅದೇ ಶಾಲು. ಅದನ್ನು ಕುಮಾರಸ್ವಾಮಿ ಮರೆತಿದ್ದಾರೆ. ಈ ಬಗ್ಗೆ ಜನರೇ ಉತ್ತರ ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ಚಿಹ್ನೆ ಇಂದು ವ್ಯಾಲ್ಯೂ ಕಳೆದುಕೊಂಡಿದೆ. ಅದಕ್ಕೆ ಹಸಿರು ಟವೆಲ್ ಹಾಕಿಕೊಂಡು ಬೀದಿಯಲ್ಲಿ ಹೋರಾಟ ನಡೆಸಿದ್ದಾರೆ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್, ಹೆಚ್.ಡಿ.ದೇವೇಗೌಡರನ್ನು ಪ್ರಧಾನಿ ಮಾಡಿದ್ದೂ ಅದೇ ಶಾಲು, ಕುಮಾರಸ್ವಾಮಿಯವರನ್ನು ಸಿಎಂ ಮಾಡಿದ್ದೂ ಅದೇ ನಮ್ಮ ಶಾಲು. ಈಗ ಕುಮಾರಸ್ವಾಮಿ ಆ ಶಾಲಿನ ವಿರುದ್ಧವೇ ಮಾತನಾಡುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ರೈತರ ಹೋರಾಟಕ್ಕೆ ನಮ್ಮ ಬೆಂಬಲವಿಲ್ಲ ಎಂದಿರುವ ಕುಮಾರಸ್ವಾಮಿ, ಕಾಂಗ್ರೆಸ್ ಚಿಹ್ನೆಗೆ ಈಗ ಬೆಲೆಯಿಲ್ಲದಾಗಿದೆ. ಹಾಗಾಗಿ ಹಸಿರು ಟವೆಲ್ ಹಾಕಿಕೊಂಡು ಹೋರಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದರು.