Kannada NewsLatest

*ಅಂಕಲಗಿ ಶ್ರೀಗಳಿಗೆ ಶೃದ್ಧಾಂಜಲಿ ಅರ್ಪಿಸಿದ ಹುಕ್ಕೇರಿ ಕಾರಂಜಿಮಠದ ಶ್ರೀಗಳು*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಅಂಕಲಗಿ ಅಡವಿಸಿದ್ದೇಶ್ವರ ಮಠದ ಶ್ರೀ ಗುರುಸಿದ್ಧ ಮಹಾಸ್ವಾಮೀಜಿ ಇತ್ತೀಚೆಗೆ ಲಿಂಗೈಕೆರಾಗಿದ್ದಾರೆ. ಇವರ ಗದ್ದುಗೆಗೆ ಬೆಳಗಾವಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹಾಗೂ ಬೆಳಗಾವಿ ಕಾರಂಜಿಮಠದ ಗುರುಸಿದ್ಧ ಸ್ವಾಮೀಜಿ ಪೂಜೆ ಸಲ್ಲಿಸಿ ಶೃದ್ಧಾಂಜಲಿ ಅರ್ಪಿಸಿದರು.

ಈ ವೇಳೆ ಮಾತನಾಡಿದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಅಂಕಲಗಿ ಶ್ರೀಗಳು ಭಕ್ತರ ಶೃದ್ಧಾ ಕೇಂದ್ರವಾಗಿರುವ ಅಂಕಲಗಿ ಅಡವಿಸಿದ್ದೇಶ್ವರ ಮಠವನ್ನು ಪುನರೋತ್ಥಾನಗೊಳಿಸುವುದರ ಮೂಲಕ ಅನೇಕ ಜನಪರ ಕೆಲಸ ಮಾಡಿದ್ದಾರೆ. ಇವರ ಅಗಲಿಕೆಯಿಂದ ಇಡೀ ಸಮಾಜಕ್ಕೆ ತುಂಬಲಾರದಷ್ಟು ನಷ್ಟವಾಗಿದೆ. ಶ್ರೀಗಳ ಆದರ್ಶ ಎಲ್ಲರಿಗೂ ಮಾದರಿ ಎಂದರು.

ಈ ಸಂದರ್ಭದಲ್ಲಿ ಪಾಶ್ಚಾಪುರ ಹಿರೇಮಠದ ಶ್ರೀ ವಿಶ್ವಾರಾದ್ಯ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button