Uncategorized

*ನಾಳೆಯಿಂದ ಅನ್ನಭಾಗ್ಯ ಉಚಿತ ಅಕ್ಕಿ ಯೋಜನೆ ಆರಂಭ; 5ಕೆಜಿ ಬದಲು ಹಣ ವಿತರಣೆ; ಸಚಿವ ಕೆ.ಹೆಚ್.ಮುನಿಯಪ್ಪ ಮಾಹಿತಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಾಳೆಯಿಂದ ರಾಜ್ಯಾದ್ಯಂತ ಅನ್ನಭಾಗ್ಯ ಯೋಜನೆ ಆರಂಭವಾಗಲಿದೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮುನಿಯಪ್ಪ, ನಾಳೆಯಿಂದ ಅನ್ನಭಾಗ್ಯ ಯೋಜನೆ ಆರಂಭವಾಗಲಿದ್ದು, 5 ಕೆಜಿ ಉಚಿತ ಅಕ್ಕಿ ಜೊತೆಗೆ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಾಗಿ ಹಣ ನೀಡಲಾಗುತ್ತದೆ ಎಂದರು.

ಹೆಚ್ಚುವರಿ 5 ಕೆಜಿ ಅಕ್ಕಿ ಸಿಗುವವರೆಗೂ ಖಾತೆಗೆ ಹಣ ಹಾಕಲಾಗುತ್ತದೆ. ಶೇ.90ರಷ್ಟು ಜನರಿಗೆ ಬ್ಯಾಂಕ್ ಖಾತೆಗಳು ಇರುವ ಬಗ್ಗೆ ಮಾಹಿತಿ ಇದೆ. ಬ್ಯಾಂಕ್ ಅಕೌಂಟ್ ಇಲ್ಲದವರು ಹೊಸದಾಗಿ ಬ್ಯಾಂಕ್ ಅಕೌಂಟ್ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button