
ಪ್ರಗತಿವಾಹಿನಿ ಸುದ್ದಿ: ಅನ್ನಭಾಗ್ಯ ಯೋಜನೆ ಹಿನ್ನೆಲೆಯಲ್ಲಿ ಅಕ್ಕಿ ಬದಲಾಗಿ ಫಲಾನುಭವಿಗಳ ಖಾತೆಗೆ ಹಣ ಹಾಕುತ್ತಿದ್ದ ರಾಜ್ಯ ಸರ್ಕಾರ ಇದೀಗ ಅಕ್ಕಿ ನೀಡಲು ನಿರ್ಧರಿಸಿದೆ.
ಅನ್ನಭಾಗ್ಯ ಯೋಜನೆಯ ಅಡಿ ಹಣದ ಬದಲು ಅಕ್ಕಿಯನ್ನು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಪ್ರತಿ ಫಲಾನುಭವಿಗಳಿಗೆ ಹಣದ ಬದಲಾಗಿ 10 ಕೆಜಿ ಅಕ್ಕಿ ವಿತರಿಸಲು ತೀರ್ಮಾನಿಸಲಾಗಿದೆ.
ಅನ್ನಭಾಗ್ಯದ 10 ಕೆಜಿ ಅಕ್ಕಿಗೆ ಕೇಂದ್ರ ಸರ್ಕಾರ ಹೆಚ್ಚವರಿ ಅಕ್ಕಿ ನೀಡಲು ನಿರಾಕರಿಸಿದ್ದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 5 ಕೆಜಿ ಅಕ್ಕಿ ಹಾಗೂ 5 ಕೆಜಿ ಅಕ್ಕಿ ಬದಲಿಗೆ 170 ರೂಪಾಯಿ ಹಣ ನೀಡಲಾರಂಭಿಸಿತ್ತು. ಈಗ ಅಕ್ಕಿ ಲಭ್ಯವಾಗುತ್ತಿರುವ ಹಿನ್ನೆಲೆಯಲ್ಲಿ 10 ಕೆಜಿ ಅಕ್ಕಿಯನ್ನೇ ನೀಡಲು ಸರ್ಕಾರ ತೀರ್ಮಾನಿಸಿದೆಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ