Belagavi NewsBelgaum NewsElection NewsKannada NewsKarnataka NewsPolitics

ಅಣ್ಣಾಸಾಹೇಬ ಜೊಲ್ಲೆ ನಾಮಪತ್ರ ಸಲ್ಲಿಕೆ

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ –
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಅವರು ಸೋಮವಾರ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಗಳಾದ ಜಿಲ್ಲಾ ಪಂಚಾಯತಿ ಸಿಇಓ ರಾಹುಲ ಶಿಂಧೆ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಪ್ರಭಾರಿ, ವಿಧಾನಪರಿಷತ್ ಸದಸ್ಯ ಪಿ.ಎಚ್.ಪೂಜಾರ, ಮಾಜಿ ಸಚಿವರಾದ ಶ್ರೀಮಂತ ಪಾಟೀಲ, ಶಾಸಕರಾದ ಧುರ್ಯೋಧನ ಐಹೊಳೆ, ಮಾಜಿ ಶಾಸಕರಾದ ಮಹೇಶ ಕುಮಟಳ್ಳಿ ಜೊಲ್ಲೆಯವರೊಂದಿಗೆ ಉಪಸ್ಥಿತರಿದ್ದರು.

ಭಾರತೀಯ ಜನತಾ ಪಕ್ಷದ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತಿರುವ ಹಿನ್ನೆಲೆ, ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕ ಶಶಿಕಲಾ ಜೊಲ್ಲೆ ,ಚಿಕ್ಕೋಡಿ ಲೋಕಸಭೆ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಬಸವಜ್ಯೋತಿ ಯೂಥ ಫೌಂಡೇಶನ್ ಅಧ್ಯಕ್ಷ್ಯ ಬಸವಪ್ರಸಾದ ಜೊಲ್ಲೆಯವರು ಜಗಜ್ಯೋತಿ ಬಸವೇಶ್ವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಬಳಿಕ ಗೋ ಪೂಜೆ ಹಾಗೂ ಚೇತಕ ಅಶ್ವಕ್ಕೆ ಪೂಜೆ ನೆರವೇರಿಸಿದರು.

Home add -Advt

Related Articles

Back to top button