![LaxmiTai 5](https://pragativahini.com/wp-content/uploads/2024/06/Laxmi-Tai-add-5.jpg)
![GIT add 2024-1](https://pragativahini.com/wp-content/uploads/2024/04/GIT-add-2024-1.jpg)
ಪ್ರಗತಿವಾಹಿನಿ ಸುದ್ದಿ: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರದಲ್ಲಿ ಸಾಯಿತೇಜ ಎಂಬುವರ ಹೆಸರು ಚಂದ್ರಶೇಖರ್ ಡೆತ್ನೋಟ್ನಲ್ಲಿ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ದಾವಣಗೆರೆ ಜಿಲ್ಲೆ ಚನ್ನಗಿರಿಯಲ್ಲಿ ಸಾಯಿತೇಜನನ್ನು ಬಂಧಿಸಿ, ಬೆಂಗಳೂರಿಗೆ ಕರೆತಂದಿದ್ದಾರೆ.
ಇವರ ಬಳಿ ಹಣಕಾಸು ವರ್ಗಾವಣೆ ಸಂಬಂಧದ ಕೆಲವು ಮಹತ್ವದ ದಾಖಲೆಗಳು ಪತ್ತೆಯಾಗಿವೆ ಎಂಬುದು ತಿಳಿಬಂದಿದೆ. ಆತ್ಮಹತ್ಯೆಗೆ ಶರಣಾದ ನಿಗಮದ ಅಧಿಕಾರಿ ಚಂದ್ರಶೇಖರನ್ ಬರೆದಿದ್ದ ಮರಣಪತ್ರದಲ್ಲಿ ಸಾಯಿತೇಜ ಹೆಸರು ಉಲ್ಲೇಖಿಸಿದ್ದರು. ಎಸ್ಐಟಿ ಅಧಿಕಾರಿಗಳು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ಬಳಿಕ ಸಾಯಿತೇಜ ಅವರ ವಿಚಾರಣೆ ನಡೆಸಲಿದ್ದಾರೆ.
![Emergency Service](https://pragativahini.com/wp-content/uploads/2023/06/IMG-20221115-WA0034.jpg)
ಈ ಹಿಂದೆ ಬಂಧಿಸಲ್ಪಟ್ಟ ಸತ್ಯನಾರಾಯಣ ವರ್ಮಾ ಸಹಚರನಾಗಿದ್ದು ಸಹಚರನಾಗಿದ್ದು, ಹೈದ್ರಾಬಾದ್ನ ಕೋ-ಆಪರೇಟಿವ್ ಬ್ಯಾಂಕ್ ವೊಂದರಲ್ಲಿ ನಕಲಿ ಖಾತೆ ತೆರೆಯುವಲ್ಲಿ ಈ ಇಬ್ಬರದ್ದು ಪ್ರಮುಖ ಪಾತ್ರವಿದೆ ಎಂಬ ಆರೋಪ ಕೇಳಿಬಂದಿದೆ.