Belagavi NewsBelgaum NewsKannada NewsKarnataka News

*ಬೆಳಗಾವಿಯಲ್ಲಿ ಮತ್ತೊಂದು ಅಗ್ನಿ ಅವಘಡ: ತಪ್ಪಿದ ಭಾರಿ ಅನಾಹುತ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಮಾರುತಿ ನಗರದ ಮಹಾವೀರ ಕಾಲೋನಿಯಲ್ಲಿ ಮನೆಯಲ್ಲಿ ಯಾರು ಇಲ್ಲದ ವೇಳೆ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಸಂಪೂರ್ಣ ಮನೆ ಸುಟ್ಟು ಕರಕಲಾಗಿದೆ. 

ಕೂಲಿ ಕೆಲಸ ಮಾಡಿಕೊಂಡು ಶೆಡ್ ನಲ್ಲಿ ಜೀವನ ಸಾಗಿಸುತ್ತಿದ್ದ ಚನ್ನಪ್ಪ ವಿಠಲ ಲಮಾಣಿ ಎನ್ನುವವರ ಮನೆಯಲ್ಲಿ ತಡರಾತ್ರಿ ಏಕಾಏಕಿ ಸಿಲಿಂಡರ್ ಸ್ಪೋಟವಾಗಿ ಸಂಪೂರ್ಣ ಮನೆ ಸುಟ್ಟು ಕರಕಲಾಗಿದೆ. ಇನ್ನು ಈ ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಆದರೆ ವಿಠಲ ಲಮಾಣಿ ಅವರು ಕೂಲಿ ಕೆಲಸ ಮಾಡಿ ಕೂಡಿಟ್ಟಿದ 1.80 ಸಾವಿರ ನಗದು ಹಾಗೂ 35 ಗ್ರಾಮ್ ಚಿನ್ನ ಬೆಂಕಿ ಪಾಲಾಗಿದೆ. ಇನ್ನು ಈ ಘಟನೆ ನಡೆದ ಕೂಡಲೆ ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.  ಮಾಳಮಾರುತಿ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.‌ 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button