Latest

ಹಾಲು ಉತ್ಪಾದಕರಿಗೆ ಮತ್ತೊಂದು ಸಂತಸದ ಸುದ್ದಿ

 ಪ್ರಗತಿವಾಹಿನಿ ಸುದ್ದಿ,  ಬೆಂಗಳೂರು : ಹಾಲು ಉತ್ಪಾದಕ ರೈತರಿಗೆ ಉತ್ಪಾದನಾ ವೆಚ್ಚವನ್ನು ತಗ್ಗಿಸಿ ಹಾಲು ಉತ್ಪಾದನೆ ಹೆಚ್ಚಿಸಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನಾಳೆಯಿಂದಲೇ ಜಾರಿಗೆ ಬರುವಂತೆ ಪ್ರತಿ ಟನ್‌ಗೆ ರೂ. ೫೦೦ ಕಡಿಮೆ ಮಾಡಲು ತೀರ್ಮಾನಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

ಈ ಬಗ್ಗೆ ಶುಕ್ರವಾರ ಸಂಜೆ ಹೊರಡಿಸಿರುವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಫೆಬ್ರುವರಿ ಮತ್ತು ಮಾರ್ಚ ತಿಂಗಳಲ್ಲಿ ಪ್ರತಿ ಟನ್‌ಗೆ ರೂ. ೫೦೦ ರಿಯಾಯತಿಯನ್ನು ನೀಡಲು ನಿರ್ಧರಿಸಲಾಗಿದ್ದು, ಇದರಿಂದಾಗಿ ಒಟ್ಟಾರೆ ಪ್ರತಿ ಟನ್‌ಗೆ ೧ ಸಾವಿರ ರೂ. ಹಣ ಕಡಿಮೆ ಮಾಡಿದಂತಾಗುತ್ತದೆ ಎಂದು ಹೇಳಿದ್ದಾರೆ.

ಕರ್ನಾಟಕ ಹಾಲು ಮಹಾಮಂಡಳಿಯ ೫ ಪಶು ಆಹಾರ ಘಟಕಗಳಿಂದ ತಿಂಗಳಿಗೆ ಅಂದಾಜು ೫೨ ಸಾವಿರ ಟನ್ ಪಶು ಆಹಾರವನ್ನು ಉತ್ಪಾದನೆ ಮಾಡಿ ಹಾಲು ಉತ್ಪಾದಕರಿಗೆ ಮಾರಾಟ ಮಾಡಲಾಗುತ್ತಿದೆ. ಪ್ರತಿ ಟನ್‌ಗೆ ಒಟ್ಟು ಸಾವಿರ ರೂ. ಹಣ ಕಡಿಮೆ ಮಾಡುವುದರಿಂದ ಹಾಲು ಮಹಾಮಂಡಳಿಯು ತಿಂಗಳಿಗೆ ೫ ಕೋಟಿ ರೂ.ಗಳನ್ನು ರಾಜ್ಯದ ಹಾಲು ಉತ್ಪಾದಕ ರೈತರಿಗೆ ನೀಡಿದಂತಾಗುತ್ತದೆ.

ರೈತರ ಆರ್ಥಿಕಾಭಿವೃದ್ಧಿ ಹಿನ್ನೆಲೆಯಲ್ಲಿ ಕರ್ನಾಟಕ ಹಾಲು ಮಹಾಮಂಡಳಿಯು ಈ ನಿರ್ಧಾರವನ್ನು ಸರ್ವಾನುಮತದಿಂದ ಕೈಗೊಂಡಿದ್ದು, ಹಾಲು ಉತ್ಪಾದನೆ ಹೆಚ್ಚಿಸಲು ಪ್ರೋತ್ಸಾಹಿಸುವ ಸಂಬಂಧ ಪಶು ಆಹಾರದ ಬೆಲೆಯನ್ನು ಇಳಿಕೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

Home add -Advt

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button