ಬಿಜೆಪಿಯ ಮತ್ತೊಂದು ಪಟ್ಟಿ ಬಿಡುಗಡೆ: ಗೋವಿಂದ ಕಾರಜೋಳಗೂ ಸಿಕ್ತು ಟಿಕೆಟ್!

ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಲೋಕಸಭಾ ಚುನಾವಣೆಯ ಟಿಕೆಟ್ ಹಂಚಿಕೆ ಮಾಡಿ ಮತ್ತೊಂದು ಪಟ್ಟಿಯನ್ನು ಭಾರತೀಯ ಜನತಾ ಪಾರ್ಟಿ ಬುಧವಾರ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಕೇವಲ ಇಬ್ಬರು ಹೆಸರಿದೆ. ಚಿತ್ರದುರ್ಗಕ್ಕೆ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಟಿಕೆಟ್ ನೀಡಲಾಗಿದೆ. ಅಮರಾವತಿಗೆ ನವನೀತ್ ರಾಣಾಗೆ ಟಿಕೆಟ್ ನೀಡಲಾಗಿದೆ. *ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿರುದ್ಧ ರಾಜಕುಮಾರ ಟೋಪಣ್ಣವರ್ ಹಿಗ್ಗಾಮುಗ್ಗಾ ವಾಗ್ದಾಳಿ*