Belagavi NewsBelgaum NewsKannada NewsKarnataka News

*ಖಾನಾಪುರದಲ್ಲಿ ಭೀಕರ ಅಪಘಾತ: ರಜೆ ಮೇಲೆ ಬಂದಿದ್ದ ಯೋಧ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ರಜೆಯ ಮೇಲೆ ಊರಿಗೆ ಬಂದಿದ್ದ ಯೋಧರಿಬ್ಬರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಇಲ್ಲಿನ ಖಾನಾಪುರ ತಾಲೂಕಿನ ಇದ್ದಿಲುಹೊಂಡ ಗ್ರಾಮದಲ್ಲಿ ಬೈಕ್ ಅಪಘಾತದಲ್ಲಿ ಯೋಧ ಮೃತಪಟ್ಟಿದ್ದಾರೆ. ಸೌರಭ್ ದ್ರೌಪದಕರ್ (28) ಮೃತ ಯೋಧ.

Home add -Advt

ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣತಪ್ಪಿದ ಬೈಕ್ ಪಲ್ಟಿಯಾಗಿ ಬಿದ್ದು ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಖಾನಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button