Belagavi NewsFilm & EntertainmentKannada NewsKarnataka NewsLatest

ಮತ್ತೆ ಒಂದಾದ ಸೂಪರ್ ಸಕ್ಸಸ್ ಜೋಡಿ ಕವಿರಾಜ್-ವಿಜಿ: ‘ಊರಿಗೊಬ್ಳೆ ಪದ್ಮಾವತಿ’ ಬಳಿಕ ಬರ್ತಿದೆ ಮತ್ತೊಂದು ಸ್ಪೆಷಲ್ ಸಾಂಗ್

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ‘ಊರಿಗೊಬ್ಳೆ ಪದ್ಮಾಪತಿ…’ ಸಾಂಗ್ ಯಾರ್ ತಾನೆ ಕೇಳಿಲ್ಲ. ಸ್ಯಾಂಡಲ್‌ವುಡ್ ಕ್ವೀನ್, ಮೋಹಕತಾರೆ ರಮ್ಯಾ ಪದ್ಮಾಪತಿಯಾಗಿ ಹಾಡಿಗೆ ಹೆಜ್ಜೆ ಹಾಕಿದ್ದರು. ರಮ್ಯಾಗೆ ದುನಿಯಾ ವಿಜಿ ಸಾಥ್ ನೀಡಿದ್ದರು.

‘ಜಾನಿ ಮೇರಾ ನಾಮ್ ಪ್ರೀತಿ ಮೇರಾ ಕಾಮ್’ ಸಿನಿಮಾದ ಹಾಡು ಇದಾಗಿದ್ದು ಇಬ್ಬರೂ ಸಖತ್ ಆಗಿ ಹೆಜ್ಜೆ ಹಾಕಿದ್ದರು. ವಿ ಹರಿಕೃಷ್ಣ ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದಿರುವ ಈ ಸುಂದರ ಹಾಡಿಗೆ ಸಾಹಿತ್ಯ ರಚಿಸಿದ್ದು ಖ್ಯಾತ ಚಿತ್ರಸಾಹಿತಿ ಕವಿರಾಜ್. ಈ ಹಾಡಿನ ಬಳಿಕ ರಮ್ಯಾ ಸ್ಯಾಂಡಲ್‌ವುಡ್ ಪದ್ಮಾವತಿ ಅಂತನೆ ಖ್ಯಾತಿ ಗಳಿಸಿದರು. ಅಷ್ಟರ ಮಟ್ಟಿಗೆ ಈ ಹಾಡು ಹಿಟ್ ಆಗಿತ್ತು. ಆ ಸೂಪರ್ ಹಿಟ್ ಹಾಡಿನ ಬಗ್ಗೆ ಈಗ್ಯಾಕೆ ಅಂತೀರಾ? ಕವಿರಾಜ್ ಮತ್ತು ದುನಿಯ ವಿಜಿ ಕಾಂಬಿನೇಷ್‌ನಲ್ಲಿ ಮತ್ತೊಂದು ವಿಶೇಷ ಹಾಡು ಮೂಡಿ ಬರುತ್ತಿದೆ. ‘ಪದ್ಮಾವತಿ’ ಹಾಡಿನ ಬಳಿಕ ಮತ್ತೊಂದು ಬ್ಲಾಕ್ ಬಸ್ಟರ್ ಹಿಟ್‌ಗೆ ಸಜ್ಜಾಗಿದೆ ಈ ಜೋಡಿ.

ದುನಿಯಾ ವಿಜಿಯ್ ಸದ್ಯ ‘ಭೀಮ’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಶೂಟಿಂಗ್ ಮುಗಿಸಿರುವ ವಿಜಿ ರಿಲೀಸ್ ತಯಾರಿಯಲ್ಲಿದ್ದಾರೆ. ‘ಭೀಮ’ ಸಿನಿಮಾಗಾಗಿ ಕವಿರಾಜ್ ವಿಶೇಷ ಹಾಡೊಂದನ್ನು ಬರೆದಿದ್ದಾರೆ. ಅಂದು ‘ಪದ್ಮಾವತಿ’ ಅಂತ ಮೋಡಿ ಮಾಡಿದ್ದ ಕವಿರಾಜ್ ಇದೀಗ, ‘ಬೇಡ ಬೇಡ ದೊಡ್ಡ ಪಾರ್ಟಿ…’ ಎನ್ನುತ್ತಾ ಮತ್ತೆ ಗಾಯಪ್ರಿಯರ ಮುಂದೆ ಬರ್ತಿದ್ದಾರೆ. ಈ ಬಗ್ಗೆ ಕವಿರಾಜ್ ಅವರೇ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

‘ಬೇಡ ದೊಡ್ಡ ದೊಡ್ಡ ಪಾರ್ಟಿ.. ಕುಡಿಸು ನೀ ಸಾಕು ಬೈ ಟೂ ಟೀ…’ ಸಾಲುಗಳಿಂದ ಪ್ರಾರಂಭವಾಗುವ ಈ ಹಾಡು ಭೀಮ ಸಿನಿಮಾದ ಹೈ ವೋಲ್ಟೇಜ್ ಹಾಡು ಇದಾಗಿದೆ. ಅಂದಹಾಗೆ ಭೀಮ ಚಿತ್ರಕ್ಕೆ ಚರಣ್ ರಾಜ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಚರಣ್ ರಾಜ್ ಸಂಗೀತ, ಕವಿರಾಜ್ ಸಾಹಿತ್ಯ ಹಾಗೂ ದುನಿಯಾ ವಿಜಯ್ ನಟನೆ. ಈ ಮೂವರ ಕಾಂಬಿನೇಷನ್‌ನಲ್ಲಿ ಬರ್ತಿರುವ ಹಾಡಿನ ಮೇಲೆ ನಿರೀಕ್ಷೆ ಈಗಾಗಲೇ ಹೆಚ್ಚಾಗಿದ್ದು ತೆರೆಮೇಲೆ ನೋಡಲು ಅಭಿಮಾನಿಗಳು ಸಹ ಕಾತರರಾಗಿದ್ದಾರೆ.

‘ಭೀಮನ ಟೀಂಯಿಂದ ಚರಣ್ ರಾಜ್ ಸಂಗೀತದಲ್ಲಿ ಒಂದು ಖಡಕ್ ಸಾಂಗ್ ಲೋಡಿಂಗ್…ಬೇಡ ಬೇಡವೆಂದರೂ ಛೇರ್ ಮೇಲೆ ನನ್ನ ಕೂರಿಸಿ , ತಾವು ಹಿಂದೆ ನಿಂತು ಒಬ್ಬ ತಂತ್ರಜ್ಞರಿಗೆ ಗೌರವ ನೀಡಿದ್ದು ಹೃದಯವಂತ ವಿಜಯ್ ಸರ್’ ಎಂದು ಬರೆದುಕೊಂಡಿದ್ದಾರೆ. ದುನಿಯಾ ವಿಜಯ್ ತಂತ್ರಕ್ಷರನ್ನು ತುಂಬಾ ಚೆನ್ನಾಗಿ ನೋಡಿಕಳ್ಳುತ್ತಾರೆ, ಅಷ್ಟೆಯಲ್ಲದೇ ಅವರಿಗೆ ಸಲ್ಲ ಬೇಕಾದ ಗೌರವನನ್ನು ನೀಡುತ್ತಾರೆ. ಹಾಗಾಗಿಯೇ ವಿಜಿ ಎಂದರೆ ತಂತ್ರಕ್ಷರಿಗೆ ಇಷ್ಟ. ಚಿತ್ರಸಾಹಿತಿ ಕವಿರಾಜ್ ಕೂಡ ಇದನ್ನೆ ಹೇಳಿದ್ದಾರೆ. ಸುಂದರ ಸಾಲುಗಳ ಜೊತೆಗೆ ಕವಿರಾಜ್ ಛೇರ್ ಮೇಲೆ ಕುಳಿತಿದ್ದು ಸುತ್ತ ಭೀಮ ಟೀಂ ನಿಂತಿರುವ ಫೋಟೋವನ್ನು ಶೇರ್ ಮಾಡಿದ್ದಾರೆ.

‘ಭೀಮ’ ಸಿನಿಮಾದ ಬಗ್ಗೆ ಹೇಳುವುದಾದರೆ ದುನಿಯ ವಿಜಯ್ ನಾಯಕನಾಗಿ ನಟಿಸಿದ್ರೆ ನಾಯಕಿಯಾಗಿ ರಂಗಭೂಮಿ ಕಲಾವಿದೆ ಅಶ್ವಿನಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಕಷ್ಣ ಸಾರ್ಥಕ್ ಈ ಸಿನಿಮಾಗೆ ಬಂಡವಾಳ ಹೂಡಿಸಿದ್ದಾರೆ. ಸಲಗ ಬಳಿಕ ದುನಿಯ ವಿಜಯ್ ಆ್ಯಕ್ಷನ್ ಕಟ್ ಹೇಳುತ್ತಿರುವ 2ನೇ ಸಿನಿಮಾ ಇದಾಗಿದೆ. ಸಲಗ ಸಕ್ಸಸ್‌ನಲ್ಲಿರುವ ವಿಜಿ ಭೀಮ ಮೂಲಕ ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button