ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಬೆಳಗಾವಿಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಕೋಟೆ ಆವರಣದಿಂದ ಮತದಾರರ ಜಾಗೃತಿ ಜಾಥಾ ನಡೆಸಿದರು.
ಜಿಲ್ಲಾ ಪಂಚಾಯತ ಸಿಇಒ ರಾಜೇಂದ್ರ ಜಾಥಾಕ್ಕೆ ಚಾಲನೆ ನೀಡಿದರು.
ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜಾಥಾ ಬೋಗಾರವೇಸ್ ವೃತ್ತದ ಮೂಲಕ ಸಾಗಿ, ವನಿತಾ ವಿದ್ಯಾಲಯದ ಆವರಣದಲ್ಲಿ ಸಮಾರೋಪಗೊಂಡಿತು.