Kannada NewsKarnataka NewsLatest

ಮತಾಂತರ ನಿಷೇಧ ಕಾಯ್ದೆಗೆ ಅನುಮೋದನೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯಾದ್ಯಂತ ತೀವ್ರ ವಿರೋಧ, ಚರ್ಚೆಗೆ ಕಾರಣವಾಗಿರುವ ಮತಾಂತರ ನಿಷೇಧ ಕಾಯ್ದೆ ಮಂಡನೆಗೆ ಸಚಿವ ಸಂಪುಟ ಸಭೆ ಗ್ರೀನ್ ಸಿಗ್ನಲ್ ನೀಡಿದೆ ಎಂದು ತಿಳಿದುಬಂದಿದೆ.

ಬೆಳಗಾವಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿದ್ದು, ಮಸೂದೆ ಮಂಡನೆಗೆ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ. ಈ ಹಿನ್ನೆಲೆಯಲ್ಲಿ ನಾಳೆಯೇ ಅಧಿವೇಶನದಲ್ಲಿ ಮಸೂದೆ ಮಂಡನಗೆ ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.

ಮತಾಂತರಕ್ಕೆ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು. ಉದ್ಯೋಗ ಹಾಗೂ ಆದಾಯದ ಬಗ್ಗೆ ಮಾಹಿತಿ ಸೇರಿದಂತೆ ಕೆಲ ಬದಲಾವಣೆಯೊಂದಿಗೆ ಕಾಯ್ದೆ ಮಂಡನೆಗೆ ರಾಜ್ಯ ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದೆ.

ಪೊಲೀಸ್ ಅಧಿಕಾರಿಗಳು ಠಾಣೆ ಮುಂದೆ ತಮ್ಮ ಸಮವಸ್ತ್ರ ಬಿಟ್ಟು ಕಾವಿ ಬಟ್ಟೆ ಹಾಕಿದರೆ ಪರಿಸ್ಥಿತಿ ಏನಾಗುತ್ತದೆ? – ಡಿ.ಕೆ.ಶಿವಕುಮಾರ ಪ್ರಶ್ನೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button