Kannada NewsKarnataka NewsLatestPolitics

*ನೂತನ ಅನುಭವ ಮಂಟಪ ಕಾಮಗಾರಿಗೆ ರೂ. 375 ಕೋಟಿ ಬಿಡುಗಡೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಪರುಷಕಟ್ಟೆ ಸೇರಿದಂತೆ ನೂತನ ಅನುಭವ ಮಂಟಪ ನಿರ್ಮಾಣ ಯೋಜನೆಯ ಪರಿಷ್ಕøತ ಮೊತ್ತ ರೂ.742 ಕೋಟಿಗಳಿಗೆ ಆಡಳಿತಾತ್ಮಕ ಅನುಮೋದನೆಯನ್ನು ನೀಡಲಾಗಿದ್ದು, ಇಲ್ಲಿಯವರಗೆ ನೂತನ ಅನುಭವ ಮಂಟಪದ ಕಾಮಗಾರಿಗೆ ರೂ.375 ಕೋಟಿಗಳನ್ನು ಬಿಡುಗಡೆ ಮಾಡಲಾಗಿರುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೆಗೌಡ ತಿಳಿಸಿದ್ದಾರೆ.

ಅವರು ವಿಧಾನ ಪರಿಷತ್‍ನಲ್ಲಿ, ಸದಸ್ಯ ಡಾ. ಎಂ. ಜಿ. ಮುಳೆ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದರು.

ನೂತನ ಅನುಭವ ಮಂಟಪದ ಕಾಮಗಾರಿಯು ಪ್ರಗತಿಯಲ್ಲಿದ್ದು, ಶರಣರ ವಚನಗಳನ್ನು ಸಂಗ್ರಹಣೆ ಮಾಡುವ ಕೆಲಸ ಪೂರ್ಣಗೊಳಿಸಲಾಗಿದ್ದು, ಅವುಗಳನ್ನು ಧ್ವನಿ ಮತ್ತು ದೃಶ್ಯ ಮಾಧ್ಯಮಗಳ ಮೂಲಕ ನೂತನ ಅನುಭವ ಮಂಟಪದ ಒಳಾಂಗಣದಲ್ಲಿ ಅಳವಡಿಸಲು ಕ್ರಮ ಕೈಗೊಳ್ಳಲಾಗಿರುತ್ತದೆ.

Home add -Advt

ಬಸವಕಲ್ಯಾಣ ಅಭಿವೃದ್ಧಿ ಮಂಡಳಿಯ ವತಿಯಿಂದ ಶರಣ ಶರಣೆಯರ ಒಟ್ಟು 29 ಸ್ಮಾರಕ/ತಾಣಗಳನ್ನು ಅಭಿವೃದ್ಧಿಗೊಳಿಸಿ ಸಂರಕ್ಷಣೆ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ 2005 ರಿಂದ ಇಲ್ಲಿಯವರೆಗೆ ಸುಮಾರು 17 ಸ್ಮಾರಕಗಳ ಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಕೊಂಡು ಪೂರ್ಣಗೊಳಿಸಲಾಗಿರುತ್ತದೆ ಹಾಗೂ ಉಳಿದ ಸ್ಮಾರಕಗಳನ್ನು ಅನುದಾನದ ಲಭ್ಯತೆಯಂತೆ ಹಂತ-ಹಂತವಾಗಿ ಅಭಿವೃದ್ಧಿ ಪಡಿಸಲು ಕ್ರಮವಹಿಸಲಾಗುತ್ತಿದೆ.

ಬಸವಕಲ್ಯಾಣ ಅಭಿವೃದ್ಧಿ ಮಂಡಳಿ ಅಧಿನಿಯಮ 2005 ರನ್ವಯ ಬೀದರ್ ಜಿಲ್ಲೆಯ ಬಸವಕಲ್ಯಾಣ ಪಟ್ಟಣದಲ್ಲಿನ ಮತ್ತು ಅದರ ಸುತ್ತಮುತ್ತಲಿನ ಪರಂಪರೆಯ ತಾಣಗಳನ್ನು ಅಂತರಾಷ್ಟ್ರೀಯ ಯಾತ್ರಾ ಸ್ಥಳವಾಗಿ ಸಾಂಸ್ಕøತಿಕ ಮತ್ತು ಪ್ರವಾಸ ಕೇಂದ್ರವಾಗಿ ಅಭಿವೃದ್ಧಿಗೊಳಿಸಲು ಮತ್ತು ಅದನ್ನು ನಿರ್ವಹಿಸಲು ಸ್ಥಾಪಿತವಾದ ಮಂಡಳಿಯಾಗಿರುತ್ತದೆ.

ಬಸವಕಲ್ಯಾಣ ಅಭಿವೃದ್ಧಿ ಮಂಡಳಿ ವ್ಯಾಪ್ತಿಯಲ್ಲಿ ಒಳಪಡುವ ಚಾಲುಕ್ಯರ ಹಳೆಯ ಕೋಟೆಯಲ್ಲಿ ಕೋಟೆಯ ಇತಿಹಾಸವನ್ನು ಧ್ವನಿ-ಬೆಳಕು  ಮತ್ತು ಲೇಸರ್ ಶೋ ಮೂಲಕ ಜನರಿಗೆ ತಿಳಿಸಲಾಗುತ್ತಿದೆ ಹಾಗೂ ಬಸವ ವನದ ಉದ್ಯಾನವನಕ್ಕೆ ತಡೆಗೋಡೆಯನ್ನು ನಿರ್ಮಿಸಲಾಗಿರುತ್ತದೆ.

ಬಸವಕಲ್ಯಾಣ ಅಭಿವೃದ್ಧಿ ಮಂಡಳಿಗೆ 2025-26 ಸಾಲಿನ ಆಯವಯ್ಯದಲ್ಲಿನ ಅನುದಾನದಲ್ಲಿ ಬಸವ ತತ್ವ ಪ್ರಸಾರ ಹಾಗೂ ಸ್ಮಾರಕಗಳ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಹಂತ-ಹಂತವಾಗಿ ಪೂರ್ಣಗೊಳಿಸಲು ಕ್ರಮವಹಿಸಲಾಗುತ್ತಿದೆ ಎಂದು ತಿಳಿಸಿದರು.

Related Articles

Back to top button