Kannada NewsKarnataka NewsNationalPolitics

*ಧೀಡಿರ್ ಮುಂಬೈಗೆ ತೆರಳಿದ ರಾಜ್ಯಪಾಲರು: ಸಿದ್ದರಾಮಯ್ಯ ಭೇಟಿ ಡೌಟ್*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಲಿರುವ ಸಿದ್ದರಾಮಯ್ಯ ಅವರು ಇಂದು ರಾಜ್ಯಪಾಲರ ಭೇಟಿಗೆ ಸಮಯಾವಕಾಶ ಕೋರಿದ್ದರು. ಈ ಮದ್ಯೆ ರಾಜ್ಯಪಾಲರು ಮುಂಬೈ ಪ್ರಯಾಣ ಬೆಳೆಸಿದ್ದು, ತೀವ್ರ ಚರ್ಚಗೆ ಕಾರಣವಾಗಿದೆ.

ಹತ್ತಿರ ಸಂಬಂಧಿಕರೊಬ್ಬರ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜ್ಯಪಾಲರು ತುರ್ತಾಗಿ ಮುಂಬೈಗೆ ತೆರಳಿದ್ದಾರೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ. ಬುಧವಾರ ತಡರಾತ್ರಿ 11:45 ರ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅವರು ಮುಂಬೈಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದಾರೆ. 

Home add -Advt

ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಲಿರುವ ಸಿದ್ದರಾಮಯ್ಯ ಅವರು ಇಂದು ರಾಜ್ಯಪಾಲರ ಭೇಟಿಗೆ ಸಮಯಾವಕಾಶ ಕೋರಿದ್ದರು. ಇದಕ್ಕೆ ಸ್ಪಂದಿಸಿದ್ದ ಲೋಕಭವನ ಗುರುವಾರ ಬೆಳಗ್ಗೆ 11:30 ಕ್ಕೆ ಹಾಗೂ ಮಧ್ಯಾಹ್ನ 3 ಗಂಟೆಯ ನಂತರ ಭೇಟಿಗೆ ಅವಕಾಶವನ್ನೂ ಕಲ್ಪಿಸಿತ್ತು.

ಸಿಎಂ ಭೇಟಿಗೆ ಕೆಲವೇ ಗಂಟೆಗಳು ಬಾಕಿ ಇರುವಾಗ ರಾಜ್ಯಪಾಲರು ಮಧ್ಯರಾತ್ರಿಯೇ ರಾಜಧಾನಿ ತೊರೆದಿರುವುದು ತೀವ್ರ ಕುತೂಹಲ ಮೂಡಿಸಿದೆ.

ರಾಜ್ಯಪಾಲರು ಇಂದೇ ಮುಂಬೈನಿಂದ ಮರಳಿ ಬರುತ್ತಾರಾ ಎನ್ನುವುದರ ಬಗ್ಗೆ ಖಚಿತತೆ ಇಲ್ಲ. ಒಂದು ವೇಳೆ ಮರಳಿ ಬಂದರೂ ಮಧ್ಯಾಹ್ನ 3 ಗಂಟೆಯ ನಂತರ ಸಿದ್ದರಾಮಯ್ಯ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ.

Related Articles

Back to top button