Kannada NewsLatest
ಲಕ್ಷ್ಮಣ ಸವದಿ ಸೇರಿ ರಾಜ್ಯ ಬಿಜೆಪಿಗೆ ಇಬ್ಬರು ಉಪಾಧ್ಯಕ್ಷರ ನೇಮಕ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸೇರಿದಂತೆ ಕರ್ನಾಟಕ ಬಿಜೆಪಿಗೆ ಇಬ್ಬರು ಉಪಾಧ್ಯಕ್ಷರನ್ನು ನೇಮಿಸಲಾಗಿದೆ. ಜೊತೆಗೆ ಇನ್ನೂ 15 ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಚುನಾವಣೆ ಹತ್ತಿರಬರುತ್ತಿದ್ದಂತೆ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಬೆಳಗಾವಿ ಜಿಲ್ಲೆಯ ಮೇಲೆ ಪಕ್ಷ ಹೆಚ್ಚಿನ ಒತ್ತು ನೀಡಿದೆ. ಮೈಸೂರಿನ ಎಂ.ಜಿ.ಮಹೇಶ್ ಅವರನ್ನು ರಾಜ್ಯ ಮುಖ್ಯ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ.
ಕೆಲವು ಜಿಲ್ಲೆಗಳ ಅಧ್ಯಕ್ಷರನ್ನು, ಕೆಲವು ಜಿಲ್ಲೆಗಳಿಗೆ ಪ್ರಭಾರಿಗಳನ್ನು ಸಹ ನೇಮಕ ಮಾಡಲಾಗಿದೆ.
ಸಂಪೂರ್ಣ ಪಟ್ಟಿ ಇಲ್ಲಿದೆ –





