Belagavi NewsBelgaum NewsElection NewsKannada NewsKarnataka NewsPolitics

ಪಾಲಿಕೆಯ ಸ್ಥಾಯಿ ಸಮಿತಿಗಳ ಅಧ್ಯಕ್ಷರ ಪದಗ್ರಹಣ 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅವಿರೋಧವಾಗಿ ಆಯ್ಕೆ ಆಗಿದ್ದ ಬೆಳಗಾವಿ ಮಹಾನಗರ ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿ ನೂತನ ಅಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮ ಇಂದು ಮಹಾನಗರ ಪಾಲಿಕೆಯಲ್ಲಿ ನಡೆಯಿತು. 

ಪಾಲಿಕೆಯ ಮಹಾಪೌರ ಸವೀತಾ ಕಾಂಬಳೆ ಅವರ ನೇತೃತ್ವದಲ್ಲಿ ಲೆಕ್ಕಸ್ಥಾಯಿ ಸಮಿತಿ ಅಧ್ಯಕ್ಷರಾಗಿ ರೇಷ್ಮಾ ಕಾಮಕರ, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶ್ರೀಶೈಲ ಕಾಂಬಳೆ, ಅರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ನೇತ್ರಾವತಿ ಭಾಗವತ್ ಹಾಗೂ ನಗರ ಯೋಜನೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಜಯತೀರ್ಥ ಸೌಂದತ್ತಿ ಅವರು ಪದಗ್ರಹಣ ಮಾಡಿದರು. 

Home add -Advt

ಪದಗ್ರಹಣ ಕಾರ್ಯಕ್ರಮದ ಬಳಿಕ ಮಹಾನಗರ ಪಾಲಿಕೆ ಕಾರ್ಯಾಲಯದ ಆವರಣದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ ಅವರ ಬೃಹತ್ ಮೂರ್ತಿಗೆ ಗೌರವ ಸಲ್ಲಿಸಲಾಯಿತು. ಈ ವೇಳೆ ಉಪಮಹಾಪೌರರಾದ ಆನಂದ ಚವ್ಹಾಣ, ಮಹಾಪಾಲಿಕೆ ಆಯುಕ್ತರಾದ ಅಶೋಕ ದುಡಗುಂಟಿ, ಬಿಜೆಪಿ ಜಿಲ್ಲಾಧ್ಯಕ್ಷೆ ಗೀತಾ ಸುತಾರ್, ಪಾಲಿಕೆ ಸದಸ್ಯರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Related Articles

Back to top button