Politics

*ಜೂನ್‌ 2 ರಂದು ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕರ್ತರ ಅಹವಾಲು ಸ್ವೀಕರಿಸಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು ಸೋಮವಾರ (ಜೂನ್‌ 2) ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರ ಅಹವಾಲು ಸ್ವೀಕರಿಸಲಿದ್ದಾರೆ.

ಅಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30 ರವರೆಗೆ ಸಚಿವರು ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕುಳಿತು ಮುಖಂಡರು ಹಾಗೂ ಕಾರ್ಯಕರ್ತರ ಸಮಸ್ಯೆ ಆಲಿಸುವರು.

Home add -Advt

ಅಹವಾಲು ಸಲ್ಲಿಸುವವರು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಗೂಗಲ್ ಫಾರ್ಮ್ ಭರ್ತಿ ಮಾಡಿ ನೋಂದಾಯಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related Articles

Back to top button