Kannada NewsKarnataka NewsLatest

ಸರಗಳ್ಳರ ಬಂಧನ: 2.65 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಪ್ರಗತಿವಾಹಿನಿ ಸುದ್ದಿ, ಖಾನಾಪುರ: ವಿವಿಧೆಡೆ ಸರಗಳ್ಳತನ ಮಾಡುತ್ತಿದ್ದ ಕಳ್ಳರ ತಂಡವೊಂದನ್ನು ಪತ್ತೆ ಹಚ್ಚಿದ ಖಾನಾಪುರ ಪೊಲೀಸರು ಇಬ್ಬರನ್ನು ಬಂಧಿಸಿ ಬಂಧಿತರಿಂದ ೨.೫೪ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡ ಘಟನೆ ಬುಧವಾರ ವರದಿಯಾಗಿದೆ.
ಪಟ್ಟಣದ ಮಲಪ್ರಭಾ ಕ್ರೀಡಾಂಗಣದ ಬಳಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಬೆಳಗಾವಿ ವಡಗಾಂವ ನಿವಾಸಿ ಪರಶುರಾಮ ದಂಡಗಲ್ ಮತ್ತು ಶಹಾಪುರ-ಖಾಸಬಾಗದ ನಿವಾಸಿ ವಿನಯ ಅಣ್ವೇಕರ ಎಂಬಾತರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದು, ಅವರು ನೀಡಿದ ಮಾಹಿತಿಯಂತೆ ಬಂಧಿತರಿಂದ ೭೯ ಗ್ರಾಂ ಚಿನ್ನಾಭರಣ ಮತ್ತು ೧೩೫ ಗ್ರಾಂ ಬೆಳ್ಳಯ ಆಭರಣ ಸೇರಿದಂತೆ ೨.೬೫ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಮತ್ತು ಕಳ್ಳತನಕ್ಕೆ ಬಳಸಿದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿ.ಪಿ.ಐ ಸುರೇಶ ಸಿಂಗಿ ಮಾಹಿತಿ ನೀಡಿದ್ದಾರೆ.

ಎಸ್.ಪಿ ಲಕ್ಷ್ಮಣ ನಿಂಬರಗಿ ಅವರ ಮಾರ್ಗದರ್ಶನದಲ್ಲಿ ನಡೆದ ಈ ದಾಳಿಯಲ್ಲಿ ಖಾನಾಪುರ ಸಿ.ಪಿ.ಐ ಸುರೇಶ ಶಿಂಗಿ, ಅಪರಾಧ ವಿಭಾಗದ ಪಿ.ಎಸ್.ಐ ಶಿವಾನಂದ ಕಾರಜೋಳ, ಅಪರಾಧ ವಿಭಾಗದ ಪ್ರೊಬೆಶನರಿ ಪಿ.ಎಸ್.ಐ ಬಸಗೌಡ ನೇರ್ಲೀ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು. ಈ ಕುರಿತು ಖಾನಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button