Latest

ಸಿಎಂ ಬದಲಾವಣೆ ಚರ್ಚೆ; ಅರುಣ್ ಸಿಂಗ್ ನೀಡಿದ ಪ್ರತಿಕ್ರಿಯೆಯೇನು? (ಯಡಿಯೂರಪ್ಪ ಬದಲಿಸುವಾಗಲೂ ಹೀಗೆ ಹೇಳಿದ್ದರು!)

ಕಾಂಗ್ರೆಸ್ ಭ್ರಮೆಯಲ್ಲಿದೆ ಎಂದ ಬಿಜೆಪಿ ಉಸ್ತುವಾರಿ –

ಯಡಿಯೂರಪ್ಪ ಕುರಿತೂ ಅರುಣ ಸಿಂಗ್ ಹೀಗೆ ಹೇಳಿದ್ದರು!

 

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಸಿಎಂ ಬದಲಾವಣೆ ಚರ್ಚೆ ಕಾಂಗ್ರೆಸ್ ನಾಯಕರು ಸೃಷ್ಟಿಸುತ್ತಿರುವ ಸುದ್ದಿ, ಇದೆಲ್ಲವೂ ಕೈ ನಾಯಕರ ಭ್ರಮೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕಿಡಿಕಾರಿದ್ದಾರೆ.

ಇಂದು ಹುಬ್ಬಳ್ಳಿಯಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಗೆ ಆಗಮಿಸಿರುವ ಅರುಣ್ ಸಿಂಗ್, ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ಬೊಮ್ಮಾಯಿ ಆಡಳಿತ ಸಂತೃಪ್ತಿ ತಂದಿದೆ. ಮುಂದಿನ ಚುನಾವಣೆ ಕೂಡ ಬೊಮ್ಮಾಯಿ ನೇತೃತ್ವದಲ್ಲೇ ನಡೆಯಲಿದೆ ಎಂದು ಹೇಳಿದರು.

ರೈತ ಮಕ್ಕಳಿಗೆ ವಿದ್ಯಾರ್ಥಿ ವೇತನ, ಬಡವರಿಗೆ ಮನೆ ನಿರ್ಮಾಣ, ಪ್ರವಾಹ ಪರಿಸ್ಥಿತಿ ನಿರ್ವಹಣೆ, ಬೆಳೆ ಪರಿಹಾರ ಸೇರಿದಂತೆ ಎಲ್ಲವನ್ನೂ ಸಿಎಂ ಬಸವರಾಜ್ ಬೊಮ್ಮಾಯಿ ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಉತ್ತಮವಾಗಿ ಆಡಳಿತ ನಡೆಸುತ್ತಿದ್ದಾರೆ ಎಂದು ಶ್ಲಾಘಿಸಿದರು.

ಇದೇ ವೇಳೆ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ ಅರುಣ್ ಸಿಂಗ್, ಸಿಎಂ ಬದಲಾವಣೆ ವಿಚಾರ ಕಾಂಗ್ರೆಸ್ ನಾಯಕರ ಊಹಾಪೋಹ, ಭ್ರಮೆ. ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್ ನಾಯಕರೇ ಹೆಚ್ಚು ತಲೆ ಕೆಡಿಸಿಕೊಳ್ಳುತ್ತಿದ್ದಾರೆ. ನಿಷ್ಕಳಂಕ ಸರ್ಕಾರದ ಮೇಲೆ ಅನಗತ್ಯ ಆರೋಪಗಳನ್ನು ಮಾಡಿ ಕುತಂತ್ರ ಮಾಡಲು ಹೊರಟಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಭ್ರಷ್ಟಾಚಾರದಿಂದ ಮುಳುಗಿತ್ತು. ಷಡ್ಯಂತ್ರ ನಡೆಸೋದು, ಸಿಡಿ ಮಾಡುವುದು ಕಾಂಗ್ರೆಸ್ ನಾಯಕರ ಕೆಲಸವಾಗಿದೆ ಎಂದು ವಾಗ್ದಾಳಿ ನಡೆಸಿದರು.

ವಿಶೇಷವೆಂದರೆ, ಯಡಿಯೂರಪ್ಪ ಅವರನ್ನು ಬದಲಾಯಿಸುವ ಕೆಲವೇ ದಿನಗಳ ಮೊದಲೂ ಅರುಣ ಸಿಂಗ್ ಇದೇ ರೀತಿ ಹೇಳಿದ್ದರು.

ಸಿಎಂ ಬೊಮ್ಮಾಯಿ ವಿಮಾನದಲ್ಲಿ ತಾಂತ್ರಿಕ ದೋಷ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button