Latest

ಫಿಕ್ಸ್ ಆಯ್ತು ಬಿಜೆಪಿ ಕೋರ್ ಕಮಿಟಿ ಸಭೆ; ಅರುಣ್ ಸಿಂಗ್ ರಾಜ್ಯ ಭೇಟಿ ಸಂಪೂರ್ಣ ವಿವರ ಇಲ್ಲಿದೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯ ಭೇಟಿಯ ಪಟ್ಟಿ ಸಿದ್ಧವಾಗಿದ್ದು, ಕೋರ್ ಕಮಿಟಿ ಸಭೆಗೂ ಮುಹೂರ್ತ ನಿಗದಿಯಾಗಿದೆ.

ಮೂರು ದಿನಗಳ ಅರುಣ್ ಸಿಂಗ್ ರಾಜ್ಯ ಭೇಟಿ ಪಟ್ಟಿ ಸಿದ್ಧವಾಗಿದ್ದು, ಜೂನ್ 16ರಂದು ಮಧ್ಯಾಹ್ನ 3:30ಕ್ಕೆ ಕೆಐಎಎಲ್ ಗೆ ಆಗಮಿಸಲಿದ್ದಾರೆ 4:30ಕ್ಕೆ ಕುಮಾರಕೃಪಾ ಗೆಸ್ಟ್ ಹೌಸ್ ತಲುಪಲಿರುವ ನಾಯಕರು ಸಂಜೆ 5 ಗಂಟೆಗೆ ಸಚಿವರ ಸಭೆ ನಡೆಸಲಿದ್ದಾರೆ. ಅಂದು ಕುಮಾರಕೃಪ ಗೆಸ್ಟ್ ಹೌಸ್ ನಲ್ಲೇ ತಂಗಲಿದ್ದಾರೆ.

ಜೂನ್ 17ರಂದು ಬಿಜೆಪಿ ಶಾಸಕರ ನಿಯೋಗ ಅರುಣ್ ಸಿಂಗ್ ಭೇಟಿಯಾಗಿ ನಾಯಕತ್ವ ಬದಲಾವಣೆ, ಪಕ್ಷದಲ್ಲಿನ ಬೆಳವಣಿಗೆಗಳ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಲಿದ್ದಾರೆ. ಜೂನ್ 18ರಂದು ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಅಂದು ಸಂಜೆ 7:40ಕ್ಕೆ ಅರುಣ್ ಸಿಂಗ್ ದೆಹಲಿಗೆ ವಾಪಸ್ ಆಗಲಿದ್ದಾರೆ.
ಪೆಟ್ರೋಲ್ ಬೆಲೆ ಏರಿಕೆಗೆ ಖಂಡನೆ; ಪ್ರಧಾನಿ ಮೋದಿಯನ್ನು ಸನ್ಮಾನಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

Home add -Advt

Related Articles

Back to top button