
ಪ್ರಗತಿವಾಹಿನಿ ಸುದ್ದಿ; ಚಿಕ್ಕಬಳ್ಳಾಪುರ: ಸಹೋದರರಿಬ್ಬರು ಗಲಾಟೆ ಮಾಡಿಕೊಂಡಿದ್ದಕ್ಕೆ ಬುದ್ಧಿವಾದ ಹೇಳಿದ್ದ ಎಎಸ್ ಐ ಸ್ಕೂಟರ್ ಗೆ ಬೆಂಕಿ ಹಚ್ಚಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ವಿವೇಕಾನಂದ ನಗರದಲ್ಲಿ ನಡೆದಿದೆ.
ಸಲೀಂ ಎ ಎಸ್ ಐ ಸ್ಕೂಟರ್ ಗೆ ಬೆಂಕಿ ಹಚ್ಚಿದ ಆರೋಪಿ. ಗುಡಿಬಂಡೆ ಪೊಲೀಸ್ ಠಾಣೆಯ ಎಎಸ್ಐ ನಂಜುಂಡ ಶರ್ಮ ಎಂಬುವವರಿಗೆ ಸೇರಿದ ಸ್ಕೂಟರ್ ಗೆ ಸಲೀಂ ಬೆಂಕಿ ಹಚ್ಚಿದ್ದಾನೆ.
ಸಲೀಂ ಹಾಗೂ ಆತನ ಸಹೋದರ ಇಬ್ಬರೂ ಗಲಾಟೆ ಮಾಡಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಎಎಸ್ ಐ ನಂಜುಂಡ ಶರ್ಮ ಆಸ್ಪತ್ರೆಗೆ ತೆರಳಿ ಇಬ್ಬರಿಗೂ ಬುದ್ಧಿ ಹೇಳಿದ್ದರು.
ಇದೇ ಕಾರಣಕ್ಕೆ ಕೋಪಗೊಂಡು ಸಲೀಂ, ನಂಜುಂಡ ಶರ್ಮ ಅವರ ನಿವಾಸಕ್ಕೆ ತೆರಳಿ, ಅವರ ಸ್ಕೂಟರ್ ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹೋಗಿದ್ದಾನೆ ಎಂದು ತಿಳಿದುಬಂದಿದೆ.