Latest

ನಾಪತ್ತೆಯಾಗಿದ್ದ ASI ಶವವಾಗಿ ಪತ್ತೆ

ಪ್ರಗತಿವಾಹಿನಿ ಸುದ್ದಿ; ಹಾಸನ: ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ಸಂಚಾರಿ ಪೊಲೀಸ್ ಎಎಸ್ಐ ಶವವಾಗಿ ಪತ್ತೆಯಾಗಿರುವ ಘಟನೆ ಹಾಸನದಲ್ಲಿ ಬೆಳಕಿಗೆ ಬಂದಿದೆ.

ಕಾಡ್ಲೂರು ಬಳಿಯ ಕಾವೇರಿ ನದಿಯಲ್ಲಿ ಎಎಸ್ಐ ಸುರೇಶ್ ಮೃತದೇಹ ಪತ್ತೆಯಾಗಿದೆ. ನಾಪತ್ತೆಯಾಗಿದ್ದ ಸುರೇಶ್ ಶವವಾಗಿ ಪತ್ತೆಯಾಗಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.

ಕೊಡಗು ಜಿಲ್ಲೆ ಕುಶಾಲನಗರದ ಟ್ರಾಫಿಕ್ ಎ ಎಸ್ ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಸುರೇಶ್, ಇತ್ತೀಚೆಗಷ್ಟೇ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದರು. ಇದೀಗ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಕೊಣನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button