Kannada NewsKarnataka NewsLatest

ಅತ್ತಿಬೆಲೆ ಪಟಾಕಿ ದುರಂತ; ಮೃತರ ಸಂಖ್ಯೆ 16ಕ್ಕೆ ಏರಿಕೆ

ಸ್ನೇಹಿತನ ಹುಟ್ಟುಹಬ್ಬಕ್ಕೆ ಪಟಾಕಿ ಖರೀದಿಗೆ ಬಂದು ದುರಂತ ಅಂತ್ಯ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದ್ದು, ಈವರೆಗೆ ಒಟ್ಟು 16 ಜನರು ಸಾವನ್ನಪ್ಪಿದ್ದಾರೆ.

ಪಟಾಕಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡು ಸೇಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಾಗಿದ್ದ ವೆಂಕಟೇಶ್ ಎಂಬಾತ ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾನೆ. ಈ ಮೂಲಕ ಅತ್ತಿಬೆಲೆ ಪಟಾಕಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.

ಮೃತ ವೆಂಕಟೇಶ್ ಬೊಮ್ಮನಹಳ್ಲಿ ಗಾರೇಬಾವಿಪಾಳ್ಯದ ನಿವಾಸಿ. ಸ್ನೇಹಿತನ ಹುಟ್ಟುಹಬ್ಬಕ್ಕೆಂದು ಅತ್ತಿಬೆಲೆಯ ಬಾಲಾಜಿ ಟ್ರೇಡರ್ಸ್ ಗೆ ಪಟಾಕಿ ಖರೀದಿಸಲು ಹೋಗಿದ್ದ. ಈ ವೇಳೆ ಬೆಂಕಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಶೇ.50ರಷ್ಟು ದೇಹ ಸುಟ್ಟು ಹೋಗಿತ್ತು. ಚಿಕಿತ್ಸೆ ಫಲಿಸದೇ ವೆಂಕಟೇಶ್ ಸಾವನ್ನಪ್ಪಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button