Kannada NewsKarnataka NewsLatest
*ಲೈವ್ ವಿಡಿಯೋ ಮಾಡುತ್ತಲೇ ವಿಷಕುಡಿದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ*

ಪ್ರಗತಿವಾಹಿನಿ ಸುದ್ದಿ; ಹಾಸನ: ಪತ್ನಿ ಹಾಗೂ ಆಕೆಯ ಮನೆಯವರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಲೈವ್ ವಿಡಿಯೋ ಮಾಡಿ ಹೇಳಿದ ವ್ಯಕ್ತಿ ವಿಷ ಸೇವಿಸಿ ಸಾವಿಗೆಶರಣಾಗಿರುವ ಘಟನೆ ಹಾಸನದ ಮಾರಗೌಡನಹಳ್ಳಿಯಲ್ಲಿ ನಡೆದಿದೆ.
ವಿನಯ್ (40) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಪತ್ನಿ ಆಶಾ ಹಾಗೂ ಅವರ ಪೋಷಕರು ತನಗೆ ಮಾನಸಿಕ ಚಿತ್ರ ಹಿಂಸೆ ನೀಡುತ್ತಿದ್ದಾರೆ. ಅವರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾರೆ.
ಅಲ್ಲದೇ ತನ್ನ ಸಾವಿಗೆ ಪತ್ನಿ ಆಶಾ, ಅತ್ತೆ ರತ್ನಮ್ಮ, ನಾದಿನಿ ಉಷಾ ಕಾರಣ ಎಂದು ಆರೋಪಿಸಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.




