Belagavi NewsBelgaum NewsKannada NewsKarnataka NewsLatest

ಅಯೋಧ್ಯೆ ಆಮಂತ್ರಣ: ವಿಶೇಷ ವಿಮಾನದ ಮೂಲಕ ತೆರಳಿದ ಡಾ.ಪ್ರಭಾಕರ ಕೋರೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯ ಸಭೆಯ ಮಾಜಿ ಸದಸ್ಯ, ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆಯವರಿಗೆ ಅಯೋಧ್ಯೆಯ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ಆಹ್ವಾನ ಬಂದಿದೆ.

ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವರು ಭಾನುವಾರ ಮುಂಜಾನೆ ಅಯೋಧ್ಯೆಗೆ ತೆರಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಡಾ.ಪ್ರಭಾಕರ ಕೋರೆ ನೇತೃತ್ವದಲ್ಲಿ 8 ಜನರ ತಂಡ ವಿಶೇಷ ವಿಮಾನದ ಮೂಲಕ ಅಯೋಧ್ಯೆಗೆ ತೆರಳಿತು.

ಜೀವನದಲ್ಲಿ ಇಂತಹ ಅವಕಾಶ ಸಿಗುವುದು ಅಪರೂಪ. ಅವಕಾಶ ಬಳಸಿಕೊಂಡು ಅಯೋಧ್ಯೆಯಲ್ಲಿ ರಾಮಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಕಣ್ತುಂಬಿ ನೋಡಿಕೊಂಡು ಬರುವುದಕ್ಕಾಗಿ ತೆರಳುತ್ತಿದ್ದೇನೆ ಎಂದು ಡಾ.ಪ್ರಭಾಕರ ಕೋರೆ ಪ್ರಗತಿವಾಹಿನಿಗೆ ತಿಳಿಸಿದರು.

Home add -Advt

ಕೆಎಲ್ಇ ಸಂಸ್ಥೆಯ ನಿರ್ದೇಶಕ ಶಂಕರಣ್ಣ ಮುನವಳ್ಳಿ, ಸ್ವರ್ಣ ಗ್ರುಪ್ ಚೇರಮನ್ ವಿ.ಎಸ್.ವಿ ಪ್ರಸಾದ ಸೇರಿದಂತೆ 8 ಜನರು ಅಯೋಧ್ಯೆಗೆ ತೆರಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button