Kannada NewsKarnataka NewsLatestPolitics
*ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ ಅಧಿಕಾರ ಸ್ವೀಕಾರ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ ಅಧಿಕಾರ ಸ್ವೀಕರಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಬಿ.ಕೆ.ಹರಿಪ್ರಸಾದ್ ಅವರಿಗೆ ಅಧಿಕಾರ ಹಸ್ತಾಂತರಿಸಲಾಯಿತು.
ನಿರ್ಗಮಿತ ಕೆಪಿಸಿಸಿ ಅಧ್ಯಕ್ಷ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬಿ.ಕೆ.ಹರಿಪ್ರಸಾದ್ ಅವರಿಗೆ ಒಅಕ್ಷದ ಬಾವುಟ ನೀಡುವ ಮೂಲಕ ಅಧಿಕಾರ ಹಸ್ತಾಂತರ ಮಾಡಿದರು. ಈ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ,ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಲವು ಗಣ್ಯರು ಉಪಸ್ಥಿತರಿದ್ದರು.


