Latest

ಯಡಿಯೂರಪ್ಪ ಭೇಟಿಯಾದ ಬಿ.ಎಲ್.ಸಂತೋಷ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದು, ಕುತೂಹಲ ಮೂಡಿಸಿದೆ.

ಬೆಂಗಳೂರಿನ ಕೆ.ಕೆ ರಸ್ತೆಯಲ್ಲಿರುವ ಕಾವೇರಿ ನಿವಾಸಕ್ಕೆ ಆಗಮಿಸಿದ ಬಿ.ಎಲ್.ಸಂತೋಷ್, ಯಡಿಯೂರಪ್ಪ ಅವರನ್ನು ಭೇಟಿಯಾಗಿ, ವಿಜಯದಶಮಿ ಹಬ್ಬದ ಶುಭಾಷಯ ಕೋರಿದರು.

Home add -Advt

ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಿ.ಎಲ್.ಸಂತೋಷ್ ಅವರ ಮೊದಲ ಭೇಟಿ ಇದಾಗಿದೆ. ಉಪಚುನಾವಣೆ ಪ್ರಚಾರ ಹಾಗೂ ರಾಜ್ಯ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಒಂಬತ್ತು ದಿನ ಜರುಗಿದ ನವಚಂಡಿಕಾ ಯಾಗ

Related Articles

Back to top button