Latest

*ಮಾಜಿ ಸಚಿವ ನಾಗೇಂದ್ರ ಮತ್ತೆ ED ಕಸ್ಟಡಿಗೆ*

ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಆರೋಪ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳಿಂದ ಬಂಧಿಸಲ್ಪಟ್ಟಿರುವ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಇಡಿ ಕಸ್ಟಡಿಗೆ ಪಡೆದಿದೆ.

ಮಾಜಿ ಸಚಿವ ನಾಗೇಂದ್ರ ಅವರ ಇಡಿ ಕಸ್ಟಡಿ ಅವಧಿ ಇಂದು ಮುಗಿದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ವೇಳೆ ನಾಗೇಂದ್ರ ಅವರನ್ನು ಇನ್ನಷ್ಟು ವಿಚಾರಣೆ ನಡೆಸುವ ನಿಟ್ಟಿನಲ್ಲಿ ಕಸ್ಟಡಿ ವಿಸ್ತರಿಸುವಂತೆ ಮನವಿ ಮಾಡಿದ್ದಾರೆ.

ಈ ವೇಳೆ ನ್ಯಾಯಾಲಯ ಬಿ.ನಾಗೇಂದ್ರ ಅವರ ಇಡಿ ಕಸ್ಟಡಿ ಅವಧಿಯನ್ನು ಮತ್ತೆ ಐದು ದಿನಗಳ ಕಾಲ ವಿಸ್ತರಿಸಿ ಆದೇಶ ಹೊರಡಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button