Latest

ಬಿ.ಎಸ್.ಯಡಿಯೂರಪ್ಪ ಭೇಟಿಯಾದ ಅರುಣ್ ಸಿಂಗ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನೂತನ ಸಿಎಂ ಆಯ್ಕೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹಾಗೂ ಧರ್ಮೇಂದ್ರ ಪ್ರಧಾನ್ ಹಂಗಾಮಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ.

ಕಾವೇರಿ ನಿವಾಸದಲ್ಲಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾದ ಅರುಣ್ ಸಿಂಗ್ ಹಾಗೂ ಧರ್ಮೇಂದ್ರ ಪ್ರಧಾನ್ ಕೆಲ ಕಾಲ ಚರ್ಚೆ ನಡೆಸಿದರು.

ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕೂಡ ಅರುಣ್ ಸಿಂಗ್ ಗೆ ಸಾಥ್ ನೀಡಿದ್ದಾರೆ. ಬಳಿಕ ಕೆ.ಕೆ. ಗೆಸ್ಟ್ ಹೌಸ್ ಗೆ ತೆರಳಿದ್ದಾರೆ.

Home add -Advt

ಇಂದು ಸಂಜೆ 7 ಗಂಟೆಗೆ ಖಾಸಗಿ ಹೋಟೆಲ್ ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲ್ಲಿದ್ದು, ನೂತನ ಸಿಎಂ ಹೆಸರು ಅಂತಿಮಗೊಳ್ಳಲಿದೆ.

ಬೆಂಗಳೂರಿಗೆ ಆಗಮಿಸಿದ ವೀಕ್ಷಕರ ತಂಡ; ನಾಳೆಯೇ ನೂತನ ಸಿಎಂ ಪದಗ್ರಹಣ?

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button