*ಮಾಜಿ ಸಿಎಂ ಯಡಿಯೂರಪ್ಪಗೆ ಗೌರವ ಡಾಕ್ಟರೇಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಶಿವಮೊಗ್ಗ ಕೆಳದಿ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ. ಕೆಳದಿ ಶಿವಪ್ಪನಾಯಕ ಕೃಷಿ ವಿಶ್ವ ವಿದ್ಯಾಲಯ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಗೌರವ ಡಾಕ್ಟರೇಟ್ ಘೋಷಿಸಿದೆ. ಶುಕ್ರವಾರ ನಡೆಯಲಿರುವ ವಿಶ್ವ ವಿದ್ಯಾಲಯ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಗೌರವ ಪ್ರದಾನ ಮಾಡಲಾಗುತ್ತಿದೆ. ಈ ಕುರಿತು ಕೆಳದಿ ಶಿವಪ್ಪನಾಯಕ ಕೃಷಿ ವಿವಿ ಕುಲಪತಿ ಪ್ರೊ.ಜಗದೀಶ್ ಮಾಹಿತ್ತಿ ನೀಡಿದ್ದಾರೆ. *ವಿಧಾನಸೌಧ ಗಾಂಧಿ ಪ್ರತಿಮೆ ಬಳಿ ಬಿಜೆಪಿ ನಾಯಕರ ಪ್ರತಿಭಟನೆ; ಸ್ಪೀಕರ್ ವಿರುದ್ಧ ಆಕ್ರೋಶ*