Latest

ರಾಜ್ಯದಲ್ಲಿ 17 ಜನರಿಗೆ ಮತ್ತೆ ಕೊರೋನಾ ಸೋಂಕು ದೃಢ : ಮದರಸಾ ಕರ್ತವ್ಯದಲ್ಲಿದ್ದ ಪೊಲೀಸರಿಗೂ ಸೋಂಕು

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಮತ್ತೆ 17 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಒಟ್ಟೂ 277ಕ್ಕೇರಿದೆ.

ಇದೀಗ ಬಿಡುಗಡೆಯಾಗಿರುವ ಹೆಲ್ತ್ ಬುಲೆಟಿನ್ ಪ್ರಕಾರ ಈವರೆಗೆ ರಾಜ್ಯದಲ್ಲಿ 11 ಜನರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.

ಇಂದು ನಂಜನಗೂಡಿನಲ್ಲಿ 8 ಜನರಿಗೆ ಕೊರೋನಾ ಸೋಂಕಿರುವುದು ದೃಢಪಟ್ಟಿದೆ. ಇವರೆಲ್ಲರೂ ಫಾರ್ಮಾ ಕಂಪನಿಯ ನೌಕರರು. ಇದರಿಂದಾಗಿ ಮೈಸೂರು ಜಿಲ್ಲೆಯಲ್ಲಿ 9 ಜನರು ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನಲ್ಲಿ ಒಂದು, ಬಾಗಲಕೋಟೆಯಲ್ಲಿ ಒಂದು, ಕಲಬುರ್ಗಿಯಲ್ಲಿ ಒಂದು, ಬೆಂಗಳೂರು ಗ್ರಾಮೀಣದಲ್ಲಿ ಒಂದು ಹಾಗೂ ವಿಜಯಪುರದಲ್ಲಿ ಇಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ಮದರಸಾ ಕರ್ತವ್ಯದಲ್ಲಿದ್ದ ಪೊಲೀಸರೊಬ್ಬರಿಗೆ ಸೋಂಕು ದೃಢಪಟ್ಟಿದೆ.

Home add -Advt

 

Related Articles

Back to top button