Election NewsPolitics
*ಈಶ್ವರಪ್ಪ ಉಚ್ಛಾಟನೆಯ ಕಾರಣ ಹೇಳಿದ ಬಿ.ವೈ.ವಿಜಯೇಂದ್ರ*
![](https://pragativahini.com/wp-content/uploads/2020/01/b-y-vijayendra.jpg)
ಪ್ರಗತಿವಾಹಿನಿ ಸುದ್ದಿ: ಪುತ್ರ ಕಾಂತೇಶ್ ಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ.ಎಸ್.ಈಶ್ವರಪ್ಪ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿ ಕಾರಿದ್ದಾರೆ. ಬಿಜೆಪಿಗೆ ಅವರ ಕಾಣಿಕೆ ಏನೂ ಇಲ್ಲ ಎಂದು ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ, ಶಿವಮೊಗ್ಗ ಕ್ಷೇತ್ರಕ್ಕೆ ಕೆ.ಎಸ್.ಈಶ್ವರಪ್ಪ ಕೊಡುಗೆ ಏನೂ ಇಲ್ಲ. ಪಕ್ಷಕ್ಕೂ ಅವರ ಕಾಣಿಕೆ ಶೂನ್ಯ ಎಂದು ವಾಗ್ದಾಳಿ ನಡೆಸಿದರು.
ಪಕ್ಷಕ್ಕೆ ಹಾನಿಯಾಗುವ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಹೇಳಿದರೂ ಈಶ್ವರಪ್ಪ ತಮ್ಮ ದಿಕ್ಕಿನಲ್ಲಿ ಮುಂದುವರೆದ ಕಾರಣ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ. 6 ವರ್ಷಗಳ ಕಾಲ ಬಿಜೆಪಿಯಿಂದ ಅವರನ್ನು ಉಚ್ಛಾಟಿಸಿ ಕ್ರಮ ಕೈಗೊಳ್ಳಲಾಗಿದೆ ಎಂದರು.