Karnataka News

*ರೈಲಿಗೆ ತಲೆಕೊಟ್ಟು ಬಿಎ ವಿದ್ಯಾರ್ಥಿನಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಬಿಎ ವಿದ್ಯಾರ್ಥಿನಿಯೊಬ್ಬಳು ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯ ಬಂದೀಗೌಡ ಬಡಾವಣೆಯಲ್ಲಿ ನಡೆದಿದೆ.

ಸುಹಾನಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಮೈಸೂರಿನಲ್ಲಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಎ ವ್ಯಾಸಂಗ ಮಾಡುತ್ತಿದ್ದ ಸುಹಾನಾ ನಿನೆ ಎಂದಿನಂತೆ ಕಾಲೇಜು ಮುಗಿಸಿ ಮನೆಗೆ ಬಂದಿದ್ದಾಳೆ. ಮಂಡ್ಯದ ಪೊಲೀಸ್ ಕ್ವಾಟ್ರೆಸ್ ಮನೆಯಿಂದ ಸ್ಕೂಟಿ ತೆಗೆದುಕೊಂಡು ಹೋದವಳು ನೇರವಾಗಿ ರೈಲ್ವೆ ಹಳಿ ಬಂದು ಸ್ಕೂಟಿ ನಿಲ್ಲಿಸಿದವಳೆ ಏಕಾಏಕಿ ರೈಲು ಹಳಿ ಬಳಿ ತೆರಳಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Home add -Advt

ಸುಹಾನಾ ರೈಲು ಹಳಿ ಬಳಿ ಸ್ಕೂಟಿ ನಿಲ್ಲಿಸಿ, ಹಳಿಯತ್ತ ಸಾಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸುಹಾನಾ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Related Articles

Back to top button