Latest

*ಬಿಜೆಪಿಗೆ ಮತ್ತೊಂದು ಶಾಕ್; ಬಾಬುರಾಮ್ ಚಿಂಚನಸೂರ ರಾಜೀನಾಮೆ; ಕೈ ಹಿಡಿಯಲು ಸಿದ್ಧತೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಗೆ ಆಘಾತದ ಮೇಲೆ ಆಘಾತ ಶುರುವಾಗಿದೆ. ಬಿಜೆಪಿಗೆ ಶಾಸಕ ಬಾಬುರಾಮ್ ಚಿಂಚನಸೂರು ರಾಜೀನಾಮೆ ನೀಡಿದ್ದಾರೆ.

ಬಾಬುರಾಮ್ ಚಿಂಚನೂರು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧರಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಇಂದೇ ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಗೆಲುವಿನ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ಇದರಿಂದ ಹೊಡೆತ ಬೀಳುವ ಸಾಧ್ಯತೆ ದಟ್ಟವಾಗಿದೆ.

ಚಿಂಚನಸೂರ ಗುರುಮಿಠಕಲ್ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಪ್ರಧಾನಿ ಮೋದಿ ಭೇಟಿಗೆ ಅವಕಾಶ ನೀಡದ ಕಾರಣಕ್ಕೆ ಹಾಗೂ ವೇದಿಕೆ ಮೇಲೆಯೇ ಸಿಎಂ ಬೊಮ್ಮಾಯಿ ತನ್ನ ವಿರುದ್ಧ ಮಾತನಾಡಿದ್ದಕ್ಕೆ, ಇತ್ತೀಚಿನ ದಿನಗಳಲ್ಲಿ ಬಿಜೆಪಿಯಲ್ಲಿ ಕಡೆಗಣಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಅಸಮಾಧಾನಗೊಂಡಿದ್ದ ಚಿಂಚನಸೂರ ಇದೀಗ ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button