Karnataka NewsLatestPolitics

*ಉಪಚುನಾವಣೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆ ಕ್ಷೇತ್ರಗಳಿಗೆ ಆಡಳಿತಾರೂಢ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ.

ನಿರೀಕ್ಷೆಯಂತೆ ಬಾಗಲಕೋಟೆ ಕ್ಷೇತ್ರಕ್ಕೆ ಉಮೇಶ್ ಮೇಟಿ ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆಯಾಗಿದ್ದು, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಸಮರ್ಥ್ ಶಾಮನೂರು ಅವರಿಗೆ ಟಿಕೆಟ್ ನೀಡಲಾಗಿದೆ. ಸಮರ್ಥ್ ಶಾಮನೂರು ಟಿಕೆಟ್ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಸಿ ಅಚ್ಚರಿ ಮೂಡಿಸಿದ್ದರು. ಅಲ್ಲದೇ ಈ ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ಕೊಡಬೇಕು ಎಂಬ ಕೂಗು ಕೂಡ ಕೇಳಿಬಂದಿತ್ತು.

Home add -Advt

ಇದೂಗ ಅಧಿಕೃತವಾಗಿ ಬಾಗಲಕೋಟೆಗೆ ಉಮೇಶ್ ಮೇಟಿ ಅವರಿಗೆ ಹಾಗೂ ದಾವಣ್ಗೆರೆ ದಕ್ಷಿಣಕ್ಕೆ ಸಮರ್ಥ್ ಶಾಮನೂರು ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ. ಏ.9ರಂದು ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.

Related Articles

Back to top button