Kannada NewsKarnataka NewsLatestPolitics

*ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಆಯ್ಕೆ ಅಸಿಂಧು*

ಪ್ರಗತಿವಾಹಿನಿ ಸುದ್ದಿ: ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ರಾಜ್ಯ ಹೈಕೋರ್ಟ್ ತೀರ್ಪು ನೀಡಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮವಾಗಿ ಸುಬ್ಬಾರೆಡ್ಡಿ ಗೆಲುವು ಸಾಧಿಸಿದ್ದಾರೆ ಎಂದು ಆರೋಪಿಸಿ ಪರಾಜಿತ ಬಿಜೆಪಿ ಅಭ್ಯರ್ಥಿ ಸಿ.ಮುನಿರಾಜು ಹೈಕೋರ್ಟ್ ಮೆಟ್ಟಿಲೇರಿದ್ದರು. ಚುನಾವಣಾ ಅಕ್ರಮದ ಮೂಲಕ ಸುಬ್ಬಾರೆಡ್ಡಿ ಶಾಅಸಕರಾಗಿ ಆಯ್ಕೆಯಾಗಿದ್ದಾರೆ. ಈ ಬಗ್ಗೆ ತನಿಖೆ ನಡೆಸಿವಂತೆ ಒತ್ತಾಯಿಸಿದ್ದಾರು.

Home add -Advt

ಸುದೀರ್ಘ ವಿಚಾರಣೆ ಬಳಿಕ ನ್ಯಾ.ಎಂ.ಜಿ.ಎಸ್.ಕಮಲ್ ಅವರಿದ್ದ ಹೈಕೋರ್ಟ್ ಪೀಠ, ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದೆ. ಈ ಹಿನ್ನೆಲೆಯಲ್ಲಿ ಮುನಿರಾಜುಗೆ ಹೈಕೋರ್ಟ್ ನಲ್ಲಿ ಗೆಲುವಾಗಿದೆ.

ಶಾಸಕ ಸುಬ್ಬಾರೆಡ್ಡಿ ತೀವ್ರ ಮುಖಭಂಗ ಅನುಭವಿಸಿದ್ದಾರೆ. ಸುಬ್ಬಾರೆಡ್ಡಿ ಶಾಸಕತ್ವ ಅಸಿಂಧು ಹಿನ್ನೆಲೆಯಲ್ಲಿ ಬಾಗೇಪಲ್ಲಿಯಲ್ಲಿ ಮತ್ತೊಮ್ಮೆ ಚುನಾವಣೆಯಾಗುವ ಸಾಧ್ಯತೆಗಳಿವೆ.


Related Articles

Back to top button