Kannada NewsKarnataka NewsLatest

*ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಮತ್ತೆ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಮತ್ತೆ ಅರೆಸ್ಟ್ ಆಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿರುವ ಬೆನ್ನಲ್ಲೇ ಪವಿತ್ರಾ ಗೌಡ ಬಂಧನವಾಗಿದೆ.

ಬೆಂಗಳೂರಿನ ಆರ್.ಆರ್.ನಗರದಲ್ಲಿರುವ ಪವಿತ್ರಾ ಗೌಡ ಅವರ ನಿವಾಸದಿಂದಲೇ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಆರ್.ಆರ್.ನಗರ ನಿವಾಸಕ್ಕೆ ತೆರಳಿರುವ ಮಹಿಳಾ ಪೊಲೀಸ್ ಅಧಿಕಾರಿಗಳು ಪವಿತ್ರಾ ಗೌಡವನ್ನು ಬಂಧಿಸಿದ್ದಾರೆ.

Home add -Advt

ಇದೇ ವೇಳೆ ಪ್ರಕರಣದ ಎ12 ಆರೋಪಿ ಲಕ್ಷ್ಮಣ್, ಎ14 ಆರೋಪಿ ಪ್ರದೋಶ್ ನನ್ನು ಕೂಡ ಪೊಲೀಸರು ಬಂಧಿಸಿದ್ದಾರೆ.

Related Articles

Back to top button