Belagavi NewsBelgaum News

*ಬೈಲಹೊಂಗಲವನ್ನು ಜಿಲ್ಲೆಯಾಗಿಸುವಂತೆ ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ ಮುಖಂಡರು*

ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಹೊಸ ಜಿಲ್ಲೆ ರಚನೆ ಮಾಡುವದಾದರೆ ಬೈಲಹೊಂಗಲ ಉಪವಿಭಾಗವನ್ನು ಜಿಲ್ಲೆಯನ್ನಾಗಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬೈಲಹೊಂಗಲ ಜಿಲ್ಲಾ ಹೊರಾಟ ಸಮಿತಿ ಅಧ್ಯಕ್ಷ ಶಿವರಂಜನ ಬೋಳಣ್ಣವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.

ಈ ವೇಳೆ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ, ಮಹಾಂತೇಶ ತುರಮರಿ, ರಾಜು ಜನ್ಮಟ್ಟಿ, ಎಫ್.ಎಸ್.ಸಿದ್ದನಗೌಡರ, ಸಿ.ಕೆ.ಮೆಕ್ಕೆದ, ಮಡಿವಾಳಪ್ಪ ಹೋಟಿ, ಗುರು ಮೆಟಗುಡ್, ಮಹಾಂತೇಶ ಮತ್ತಿಕೊಪ್ಪ, ಮಹೇಶ ಬೆಲ್ಲದ, ವಿ.ಎಸ್. ಕೋರಿಮಠ, ಬಿ.ಬಿ.ಗಣಾಚಾರಿ, ವಿಠಲ ದಾಸೋಗ, ಸುಭಾಷ ತುರಮರಿ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪಕ್ಷಾತೀತವಾಗಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಬೈಲಹೊಂಗಲ ಜಿಲ್ಲೆ ಮಾಡುವ ಸಕಾರಣಗಳ ಸಮೇತ ಸಮಗ್ರವಾಗಿ ತಯಾರಿಸಿದ ವರದಿಯನ್ನು ಮನವಿ ರೂಪದಲ್ಲಿ ನೀಡಲಾಯಿತು. ಈ ಬಗ್ಗೆ ಮುಖ್ಯಮಂತ್ರಿಗಳು ಸಕಾರತ್ಮಕ್ಕವಾಗಿ ಸ್ಪಂದಿಸಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button