Latest

ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ; ದಸರಾ ಮೆರವಣಿಗೆಗೆ ಚಾಲನೆ

ಪ್ರಗತಿವಾಹಿನಿ ಸುದ್ದಿ; ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಕಳೆಕಟ್ಟಿದ್ದು, ವಿಶ್ವವಿಖ್ಯಾತ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಸಿಎಂ ಬಸವರಾಜ್ ಬೊಮ್ಮಾಯಿ ನಂದಿಧ್ವಜಕ್ಕೆ ಪೂಜೆ ನೆರವೇರಿಸುವ ಮೂಲಕ ದಸರಾ ಮೆರವಣಿಗೆಗೆ ಚಾಲನೆ ನೀಡಿದರು.

ಮೈಸೂರು ಅರಮನೆ ಆವರದ ಬಳಿಯ ಕೋಟೆ ಆಂಜನೇಯ ದೇಗುಲದ ಎದುರು ಸಿಎಂ ಬೊಮ್ಮಾಯಿ ಸಂಜೆ 4:30 ರಿಂದ 4:46ರ ಶುಭ ಮೀನ ಲಗ್ನದಲ್ಲಿ ಜೋಡಿ ನಂದಿಧ್ವಜ ಸ್ತಂಭಕ್ಕೆ ಪೂಜೆ ಸಲ್ಲಿಸಿದರು.

ಬಳಿಕ ಮಾತನಾಡಿದ ಸಿಎಂ, ನಾಡಿನ ಜನತೆಗೆ ದಸರಾ ಹಬ್ಬದ ಶುಭಾಷಯಗಳು. ಐತಿಹಾಸಿಕ ನಂದಿಧ್ವಜ ಸ್ತಂಭಕ್ಕೆ ಪೂಜೆ ಸಲ್ಲಿಸಲಾಗಿದೆ. ನಾಡಿನ ಜನತೆಗೆ ಚಾಮುಂಡಿ ದೇವಿ ಒಳಿತನ್ನು ಮಾಡಲಿ ಎಂದು ದೇವಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸಿರುವುದಾಗಿ ತಿಳಿಸಿದರು.

ಮೈಸೂರು ಅರಮನೆಯ ಗುರು ಹುಕ್ಕೇರಿ ಹಿರೇಮಠದ ದಸರಾ ಉತ್ಸವದಲ್ಲಿ

Home add -Advt

Related Articles

Back to top button