
ಪ್ರಗತಿವಾಹಿನಿ ಸುದ್ದಿ: ಮಾಜಿ ಸಚಿವ ಕೆ.ಎನ್.ರಾಜಣ್ಣ ಬಗ್ಗೆ ಕಾಂಗ್ರೆಸ್ ಶಾಸಕ ಬಾಲಕೃಷ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಾಲಕೃಷ್ಣ, ಕೆ.ಎನ್.ರಾಜಣ್ಣ ತಮ್ಮ ಮಾತಿನಿಂದಲೇ ಕೆಟ್ಟುಹೋದರು. ಮಾತು ಮನೆ ಕೆಡಿಸಿತು. ತೂತು ಒಲೆ ಕೆಡಿಸಿತು ಎಂಬ ಮಾತಿದೆ. ಇದರಲ್ಲಿ ನಮ್ಮ ನಾಯಕರ ಷಡ್ಯಂತ್ರವಿಲ್ಲ ಎಂದರು.
ಪಕ್ಷದ ಮೇಲೆ ಗೂಬೆಕೂರಿಸಲು ಪಿತೂರಿ ನಡೆಯುತ್ತಿದೆ. ರಾಜಣ್ಣ ಅವರ ಬ್ರೇನ್ ಮ್ಯಾಪಿಂಗ್ ಆಗಲಿ. ಯಾರ ಜೊತೆ ಸಂಪರ್ಕದಲ್ಲಿದ್ದಾರೆ ಎಂಬುದು ತಿಳಿಯುತ್ತೆ. ನಮ್ಮ ಸರ್ಕಾರ ಇದೆ ಎಂದು ರಾಜಣ್ಣ ಇಲ್ಲಿದ್ದಾರೆ. ಅವರು ಅದಾಗಲೇ ಬೇರೆ ನಾಯಕರ ಜೊತೆ ಸಂಪರ್ಕದಲ್ಲಿದ್ದಾರೆ. ರಾಜಣ್ಣ ಬಿಜೆಪಿಗೆ ಅರ್ಜಿ ಹಾಕಿಕೊಂಡಿದ್ದಾರೆ ಎಂದು ಹೇಳಿದರು.