Karnataka NewsLatestPolitics
*ಬಮೂಲ್ ನೂತನ ಅಧ್ಯಕ್ಷರಾಗಿ ಡಿ.ಕೆ.ಸುರೇಶ್ ಆಯ್ಕೆ*

ಪ್ರಗತಿವಾಹಿನಿ ಸುದ್ದಿ: ಬಮೂಲ್ ( ಬೆಂಗಳೂರು ಹಾಲು ಒಕ್ಕೂಟ ಮಂಡಳಿ) ನೂತನ ಅಧ್ಯಕ್ಷರಾಗಿ ಮಾಜಿ ಸಂಸದ ಡಿ.ಕೆ.ಸುರೇಶ್ ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ಡೈರಿ ವೃತ್ತದಲ್ಲಿರುವ ಕಚೇರಿಯಲ್ಲಿ ಡಿ.ಕೆ.ಸುರೇಶ್ ಇಂದು ಬೆಳಿಗ್ಗೆ ನಾಮಪತ್ರ ಸಲ್ಲಿಕೆ ಮಾಡಿದ್ದರು. ಬಳಿಕ ಒಕ್ಕೂಟ ಸದಸ್ಯರು ನೂತನ ಅಧ್ಯಕ್ಷರನ್ನಾಗಿ ಡಿ.ಕೆ.ಸುರೇಶ್ ಅವರನ್ನು ಆಯ್ಕೆ ಮಾಡಿದರು. ಬಮುಲ್ ನೂತನ ಅಧ್ಯಕ್ಷರಾಗಿ ಡಿ.ಕೆ.ಸುರೇಶ್ ಆಯ್ಕೆಯಾಗಿದ್ದಾರೆ.




